Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ: ಮನೆ ಮನೆಗೆ ಎನ್ಯೂಮರೇಶನ್ ಫಾರ್ಮ್ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾರತೀಯ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯೋಜನೆಯಡಿ ಮತದಾರರ ಪಟ್ಟಿಯ ನವೀಕರಣ ಕಾರ್ಯಕ್ಕೆ ತೂಬಗೆರೆಯಲ್ಲಿ ಮಂಗಳವಾರ ಚಾಲನೆ ದೊರೆಯಿತು. ಇದರ ಅಂಗವಾಗಿ ಮನೆ
?ಮನೆಗೆ ತೆರಳಿ ಎನ್ಯೂಮರೇಶನ್ ಫಾರ್ಮ್ ವಿತರಿಸುವ ಕಾರ್ಯ ಆರಂಭಿಸಲಾಯಿತು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಗ್ರಾಮದ ವಾರ್ಡ್ ಸಂಖ್ಯೆ?೩೦ ರಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ರಾಧಮ್ಮ ಅವರು ಬೆಳಗ್ಗಿನಿಂದಲೇ ಮನೆಗಳಿಗೆ ಭೇಟಿ ನೀಡಿ ಮತದಾರರಿಗೆ ಎನುಮರೇಶನ್ ಫಾರ್ಮ್‌ಗಳನ್ನು ವಿತರಿಸಿದರು.

ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ನಿಖರಗೊಳಿಸುವ ಉದ್ದೇಶದಿಂದ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಹಂತದಲ್ಲಿ ಸಾರ್ವಜನಿಕರು ಯಾವುದೇ ಗುರುತಿನ ಚೀಟಿ ಅಥವಾ ಇತರೆ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಬಿಎಲ್‌ಒಗಳು ಕೇವಲ ಫಾರ್ಮ್‌ಗಳನ್ನು ವಿತರಿಸಲಿದ್ದು, ನಂತರ ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.

ಕ್ರಾಸ್ ಪರಿಶೀಲನೆ ಹಾಗೂ ದಾಖಲಾತಿ ಅನುಕೂಲಕ್ಕಾಗಿ ಪ್ರತಿ ಮತದಾರರಿಗೂ ಎರಡು ಪ್ರತಿಗಳ ಎನುಮರೇಶನ್ ಫಾರ್ಮ್ ನೀಡಲಾಗುತ್ತಿದ್ದು, ಒಂದು ಪ್ರತಿಯನ್ನು ಭರ್ತಿ ಮಾಡಿ ಬಿಎಲ್‌ಒಗೆ ಸಲ್ಲಿಸಬೇಕು ಹಾಗೂ ಮತ್ತೊಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಬಹುದು ಎಂದು ಮಾಹಿತಿ ನೀಡಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ