Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡಿಕೆ, ತೆಂಗು ಬೆಳೆಗಳಲ್ಲಿ ಬರ ನಿರ್ವಹಣೆ: ರೈತರಿಗೆ ಪ್ರಾಯೋಗಿಕ ತರಬೇತಿ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹವಾಮಾನ ವೈಪರೀತ್ಯ ಹಾಗೂ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡಿಕೆ ಮತ್ತು ತೆಂಗಿನ ತೋಟಗಳನ್ನು ಉಳಿಸಿಕೊಳ್ಳುವ ಹಾಗೂ ತೇವಾಂಶ ಸಂರಕ್ಷಣೆ ಮಾಡುವ ಕುರಿತು ತೋಟಗಾರಿಕೆ ಇಲಾಖೆ ವತಿಯಿಂದ ಸೋಮವಾರ ಚಿತ್ರದುರ್ಗ ತಾಲೂಕಿನ ಕಸಬಾ ಹೋಬಳಿಯ ಜಾನಕೊಂಡ ಮತ್ತು ಜೆ.ಎನ್. ಕೋಟೆ ಗ್ರಾಮಗಳಲ್ಲಿ ಕ್ಷೇತ್ರ ತರಬೇತಿ ಕಾರ್ಯಕ್ರಮ ನಡೆಯಿತು.

ಎಲ್ ನಿನೋ ಪರಿಣಾಮದಿಂದಾಗಿ ಮಳೆ ಅಭಾವ ಎದುರಾಗಿದ್ದು, ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶ ಹೆಚ್ಚಿ ನೀರಿನ ಕೊರತೆ ಉಂಟಾಗಿದೆ. ಇದರಿಂದ ಅಡಿಕೆ ಮತ್ತು ತೆಂಗು ಬೆಳೆಗಳ ಬೆಳವಣಿಗೆ ಕುಂಠಿತಗೊಂಡು, ರೈತರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಬಳಸಿ, ತೇವಾಂಶ ಕಾಪಾಡಿಕೊಳ್ಳುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಪ್ರಾಯೋಗಿಕವಾಗಿ ವಿವರಿಸಲಾಯಿತು.

ತೆಂಗು ಮತ್ತು ಅಡಿಕೆ ಗಿಡಗಳ ಬುಡದಲ್ಲಿ ಸಿಪ್ಪೆಗಳನ್ನು ಹೂಳುವುದು, ಒಣ ಎಲೆಗಳು ಹಾಗೂ ಹಸಿರು ಗೊಬ್ಬರದ ಎಲೆಗಳಿಂದ ಮಲ್ಚಿಂಗ್ (ಹೊದಿಕೆ) ಮಾಡುವುದು, ಕೊಟ್ಟಿಗೆ ಗೊಬ್ಬರ ಅಥವಾ ಕಾಂಪೋಸ್ಟ್ ಮಾಡಿದ ಕಾಯರ್ ಪಿಥ್' ಮಣ್ಣಿನಲ್ಲಿ ಸೇರಿಸುವುದು ಮತ್ತು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರಿನಲ್ಲಿ ಕರಗುವ ಪೋಷಕಾಂಶಗಳನ್ನು ಒದಗಿಸುವುದರಿಂದ ಬರದ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ತಿಳಿಸಲಾಯಿತು.

ತರಬೇತುದಾರರಾಗಿ ಭಾಗವಹಿಸಿದ್ದ ಹಿರಿಯೂರು ತಾಲೂಕು ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಓಂಕಾರಪ್ಪ ಮಾತನಾಡಿ, ಬರದ ಸಮಯದಲ್ಲಿ ಅಡಿಕೆ ಮತ್ತು ತೆಂಗು ಬೆಳೆಗಳಲ್ಲಿ ಕಂಡುಬರುವ ಕೀಟ ಹಾಗೂ ರೋಗ ಬಾಧೆಗಳು ಮತ್ತು ಅವುಗಳ ಹತೋಟಿ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಡಾ. ದೇವರಾಜು,  ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಸುರೇಶ್, ವೆಂಕಟೇಶ್ ನಾಯ್ಕ್, ಜಾನಕೊಂಡ ಗ್ರಾಮದ ಪ್ರಗತಿಪರ ರೈತರಾದ ಅಶೋಕ, ಮಹಾಲಿಂಗಪ್ಪ, ಆನಂದಪ್ಪ, ಶಿವಲಿಂಗಪ್ಪ, ಸುರೇಶ ಹಾಗೂ ಜೆ.ಎನ್. ಕೋಟೆ ಗ್ರಾಮದ ರೈತರಾದ ಮಂಜುನಾಥ, ಸುರೇಶ, ರುದ್ರಮುನಿಯಪ್ಪ, ನಿಂಗಪ್ಪ, ಪ್ರಸನ್ನಕುಮಾರ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಲವಾರು ರೈತರು ಭಾಗವಹಿಸಿ ತಮ್ಮ ಶಂಕೆಗಳನ್ನು ಪರಿಹರಿಸಿಕೊಂಡರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.