Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಜಾರಕಿಹೊಳಿ ಬಾಮೈದನ ನಿವಾಸದ ಮೇಲೆ ಇಡಿ ದಾಳಿ; 13 ಕೋಟಿ ಆಸ್ತಿ, ನೂರಾರು ಬೇನಾಮಿ ಬಾರ್ ಲೈಸೆನ್ಸ್ ಪತ್ತೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಹಾಗೂ ಸಂಘಟಿತ ಭ್ರಷ್ಟಾಚಾರ ನಡೆದಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿರುಗಾಳಿ ಎಬ್ಬಿಸಿದೆ. 

ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ಸೇರಿದಂತೆ ರಾಜ್ಯದ 14 ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.

ಮಾಜಿ ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ ಆಗಿರುವ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸಗಳ ಮೇಲಿನ ದಾಳಿ ವೇಳೆ ಬರೋಬ್ಬರಿ 13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

'ಸಿಂಡಿಕೇಟ್ ಜಾಲ'ದ ಮೂಲಕ ಲಂಚದ ಬೇಟೆ!:
"
ರಾಜ್ಯ ಅಬಕಾರಿ ಇಲಾಖೆಯ ಉನ್ನತ ಅಧಿಕಾರಿಗಳು, ಅವರ ಸಹಚರರು ಮತ್ತು ಕೆಲವು ಖಾಸಗಿ ವ್ಯಕ್ತಿಗಳು ಲಂಚ ಸಂಗ್ರಹಕ್ಕಾಗಿ ಒಂದು ಸಂಘಟಿತ ಸಿಂಡಿಕೇಟ್ ಜಾಲದಂತೆ ಕಾರ್ಯನಿರ್ವಹಿಸುತ್ತಿದ್ದಾರೆ" ಎಂದು ಇಡಿ ಗುರುವಾರ ಹೊರಡಿಸಿರುವ ತನ್ನ ಅಧಿಕೃತ ಪ್ರಕಟಣೆಯಲ್ಲಿ ಅತ್ಯಂತ ಗಂಭೀರ ಆರೋಪ ಮಾಡಿದೆ.

ಅಲ್ಲದೆ, ಇಲಾಖೆಯ ಬಹುತೇಕ ಅಧಿಕಾರಿಗಳು ತಮ್ಮ ಕುಟುಂಬದವರ ಹೆಸರಲ್ಲೇ ಮದ್ಯದ ಪರವಾನಗಿ ಪಡೆದು ಅಕ್ರಮವಾಗಿ ಮದ್ಯದ ವ್ಯವಹಾರ ನಡೆಸುತ್ತಿದ್ದಾರೆ ಎಂದು ಇಡಿ ತಿಳಿಸಿದೆ.

ನೂರಾರು 'ಬೇನಾಮಿ ಬಾರ್ ಲೈಸೆನ್ಸ್', ವಿದೇಶಕ್ಕೆ ಹವಾಲಾ ಲಿಂಕ್?:
ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ನಿವಾಸಗಳಲ್ಲಿ ನಡೆಸಲಾದ ಸುದೀರ್ಘ ಪರಿಶೀಲನೆಯಲ್ಲಿ ಆಘಾತಕಾರಿ ದಾಖಲೆಗಳು ಲಭ್ಯವಾಗಿವೆ.

ಬೇನಾಮಿ ಲೈಸೆನ್ಸ್ ಪತ್ತೆ: ಮಂಜುನಾಥ್ ಅವರ ನಿವಾಸಗಳಲ್ಲಿ ನೂರಾರು ಬೇನಾಮಿ ಬಾರ್ ಲೈಸೆನ್ಸ್‌ಗಳು ಹಾಗೂ ಅವುಗಳ ಅಗ್ರಿಮೆಂಟ್‌ಬಾಂಡ್‌ಗಳು ಪತ್ತೆಯಾಗಿವೆ.

ಅಕ್ರಮ ನೆಟ್‌ವರ್ಕ್: ಬೆಳಗಾವಿ, ದಾವಣಗೆರೆ, ಬಳ್ಳಾರಿ, ಮೈಸೂರು ಮತ್ತು ಬೆಂಗಳೂರಿನಲ್ಲಿ ಬೇನಾಮಿ ಹೆಸರಿನಲ್ಲಿ ದೊಡ್ಡ ಪ್ರಮಾಣದ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಹೊಂದಿದ್ದಾರೆ.

ಹವಾಲಾ ದಂಧೆಯ ಶಂಕೆ: ಈ ಬೇನಾಮಿ ಬಾರ್‌ಗಳಿಂದ ಬರುತ್ತಿದ್ದ ಕೋಟ್ಯಂತರ ರೂಪಾಯಿ ಕಪ್ಪು ಹಣವನ್ನು ಅಕ್ರಮ ಮಾರ್ಗದ ಮೂಲಕ (ಹವಾಲಾ ದಂಧೆ) ವಿದೇಶಗಳಿಗೆ ವರ್ಗಾವಣೆ ಮಾಡಿ, ಅಲ್ಲಿ ಹೂಡಿಕೆ ಮಾಡಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

ಮಂಜುನಾಥ್ ಆಪ್ತ ಅಧಿಕಾರಿಗಳಿಗೂ ಇಡಿ ಶಾಕ್!:
ವೈ. ಮಂಜುನಾಥ್ ಅವರ ಈ ಅಕ್ರಮ ಜಾಲಕ್ಕೆ ಸಾಥ್ ನೀಡಿದ ಆರೋಪದ ಮೇಲೆ ಅವರ ಆಪ್ತ ವಲಯದ ಇತರ ಇಬ್ಬರು ಪ್ರಮುಖ ಅಬಕಾರಿ ಅಧಿಕಾರಿಗಳ ಮೇಲೂ ಇಡಿ ಅಧಿಕಾರಿಗಳು ಮುಗಿಬಿದ್ದಿದ್ದಾರೆ.

ಸತೀಶ್ ಶಿವಶಂಕರ ಕಾಗಲೆ (ಎಸ್ಪಿ, ತುಮಕೂರು ಅಬಕಾರಿ ಇಲಾಖೆ): ಮಂಜುನಾಥ್ ಆಪ್ತರಾದ ಇವರ ಬೆಳಗಾವಿಯ ಶ್ರೀನಗರದಲ್ಲಿರುವ ಅಪಾರ್ಟ್‌ಮೆಂಟ್ ಹಾಗೂ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ.

ವಿಶ್ವನಾಥ್ ಗಾಣಿಗೇರ (ಡಿವೈಎಸ್ಪಿ, ಚಿಕ್ಕೋಡಿ ಅಬಕಾರಿ ಇಲಾಖೆ): ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿರುವ ಇವರ ನಿವಾಸದ ಮೇಲೂ ದಾಳಿ ನಡೆದಿದ್ದು, ಅಕ್ರಮ ವ್ಯವಹಾರದ ಲಿಂಕ್‌ಗಳ ಬಗ್ಗೆ ತನಿಖೆ ಮುಂದುವರಿದಿದೆ.

ಒಟ್ಟಿನಲ್ಲಿ, ಸಚಿವರ ಹತ್ತಿರದ ಸಂಬಂಧಿಯೇ ಆಗಿರುವ ಉನ್ನತ ಅಧಿಕಾರಿಯ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಬೇನಾಮಿ ಆಸ್ತಿ ಪತ್ತೆಯಾಗಿರುವುದು ರಾಜ್ಯ ರಾಜಕಾರಣ ಹಾಗೂ ಅಬಕಾರಿ ವಲಯದಲ್ಲಿ ತಲ್ಲಣ ಮೂಡಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.