ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶಿಕ್ಷಣ ಬದುಕಿನ ಯಶಸ್ಸಿನ ದೊಡ್ಡ ಸಾಧನಾ. ನಿರಂತರ ಪ್ರಯತ್ನ, ಛಲ, ಧೃಡ ಸಂಕಲ್ಪದಿಂದ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.
ಛಲವಾದಿ ಮಹಾಸಭಾ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ನಗರದ ಕೋರ್ಟ್ ರಸ್ತೆಯಲ್ಲಿನ ಖಾಸಗಿ ಸಭಾಂಗಣದಲ್ಲಿ ನಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಹಾಗೂ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಶಿಕ್ಷಣವು ಸಮಾಜದಲ್ಲಿ ಉತ್ತಮ ಸ್ಥಾನಮಾನ, ಆತ್ಮವಿಶ್ವಾಸ ಹಾಗೂ ಸ್ವಾವಲಂಬಿ ಬದುಕನ್ನು ರೂಪಿಸುವ ಶಕ್ತಿಯಾಗಿದೆ ಎಂದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಫ್ರೋತ್ಸಾಹಿಸುವುದರಿಂದ ಅವರು ಜೀವನದಲ್ಲಿ ಮತ್ತಷ್ಟು ಯಶಸ್ಸುಗಳಿಸಲು ಪ್ರೇರೇಪಿಸಿದಂತಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮುದಾಯದ ಜವಾಬ್ದಾರಿಯಾಗಿದೆ. ಇಂತಹ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಸ್ಪೂರ್ತಿ ನೀಡುತ್ತವೆ ಎಂದ ಅವರು, ಸಮುದಾಯ ಏಳಿಗೆಗೆ ಶ್ರಮವಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ನೂರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಛಲವಾದಿ ಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ, ಮಹಾಸಭಾದ ರಾಜ್ಯಾಧ್ಯಕ್ಷರಾದ ವಾಣಿ ಕೆ. ಶಿವರಾಂ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ವೆಂಕಟಸ್ವಾಮಿ, ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಯು ರಮೇಶ್, ಗೌರವಾಧ್ಕ್ಷ ತಿಮ್ಮರಾಯಪ್ಪ ಡಿ., ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗೂಳ್ಯ ಹನುಮಣ್ಣ, ಸಮುದಾಯದ ಮುಖಂಡರಾದ ಮರಿಯಪ್ಪ, ಮುನಿರಾಜುಗೌಡ, ಜಗದೀಶ್, ಅನಿಲ್, ರಾಜು ಸಣ್ಣಕ್ಕಿ, ಮಲ್ಲರಾಜು, ಚಂದ್ರಪ್ಪ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು, ಮುಖಂಡರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.



