Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್‌ ಆಶಯದಂತೆ ಪ್ರತಿಯೊಬ್ಬರು ನಡೆಯಬೇಕು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುನ್ಸಿಪಲ್ ಕಾಂಪ್ಲೆಕ್ಸ್‌ನಲ್ಲಿರುವ ಜಿಲ್ಲಾ ಪೌರ ಕಾರ್ಮಿಕರ ಸೇವಾ ಸಂಘದಲ್ಲಿ ಶನಿವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಪರಿನಿರ್ವಾಣ ದಿನವನ್ನು ಆಚರಿಸಿ ನಂತರ ನಗರಸಭೆ ಮುಂಭಾಗವಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಉಪಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ದಲಿತರು, ಶೋಷಿತರು, ತುಳಿತಕ್ಕೊಳಗಾದವರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜಾತಿ ಧರ್ಮದವರಿಗೆ ಸಂವಿಧಾನದಲ್ಲಿ ಸಮಾನತೆಯನ್ನು ಕಲ್ಪಿಸಿರುವ ಅಂಬೇಡ್ಕರ್‌ರವರ ಆಶಯದಂತೆ ಪ್ರತಿಯೊಬ್ಬರು ನಡೆದುಕೊಂಡಾಗ ಮಾತ್ರ ಸಂವಿಧಾನಕ್ಕೆ ನಿಜವಾದ ಅರ್ಥ ಸಿಗುತ್ತದೆ. ಪೌರ ಕಾರ್ಮಿಕರು ಮಕ್ಕಳನ್ನು 

ತಮ್ಮಂತೆಯೆ ಪೌರ ಕಾರ್ಮಿಕರನ್ನಾಗಿ ಮಾಡಬೇಡಿ. ಸಂವಿಧಾನದಡಿಯಲ್ಲಿ ಸಿಗುವ ಸೌಲತ್ತುಗಳನ್ನು ಬಳಸಿಕೊಂಡು ಶಿಕ್ಷಣವಂತರನ್ನಾಗಿಸಿ ದೊಡ್ಡ ಹುದ್ದೆಗಳಿಗೆ ಕಳಿಸಿ ಎಂದು ಮನವಿ ಮಾಡಿದರು.

ಚಿಕ್ಕಂದಿನಲ್ಲಿಯೇ ಸಾಕಷ್ಟು ಅವಮಾನ, ನೋವು, ಹಿಂಸೆಗಳನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ನಮ್ಮ ಜನಕ್ಕೆ ಇಂತಹ ಸಂಕಷ್ಟ ಎದುರಾಗಬಾರದೆಂದು ಬಲಿಷ್ಟವಾದ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಸಂವಿಧಾನದ ಆಶಯಗಳಿಗೆ ಎಲ್ಲಿಯೂ ಧಕ್ಕೆಯಾಗಲು ಬಿಡಬಾರದೆಂದು ಹೇಳಿದರು.

ಪೌರ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಕೆ.ರಾಜಣ್ಣ, ಸಹ ಕಾರ್ಯದರ್ಶಿ ನಿಜಲಿಂಗಪ್ಪ, ಉಪಾಧ್ಯಕ್ಷರುಗಳಾದ ಕುಂಚಿಗನಹಾಳ್ ಮಹಾಲಿಂಗಪ್ಪ, ನಿಜಲಿಂಗಪ್ಪ, ಖಜಾಂಚಿ ಗೋವಿಂದಪ್ಪ ಸೇರಿದಂತೆ ಪದಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನದಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ