Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಹಕ್ಕುಪತ್ರ ಜಾಲ ತಹಶೀಲ್ದಾರ್ ದಿಢೀರ್ ದಾಳಿ, ನಕಲಿ ದಾಖಲೆ ವಶಕ್ಕೆ

Advertisement
ಚಂದ್ರವಳ್ಳಿ ನ್ಯೂಸ್, ಹೊಸನಗರ : ನಕಲಿ ಹಕ್ಕುಪತ್ರಗಳು, ಅರಣ್ಯ ಎನ್‌ಒಸಿ, ಅದಕ್ಕೆ ಬಳಸಿದ ಸೀಲ್ ಗಳು ಸೇರಿದಂತೆ ನಕಲಿ ತಯಾರಿಕೆಗೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ತಾಲೂಕಿನ ಎಲ್ ಗುಡ್ಡೇಕೊಪ್ಪದಲ್ಲಿ ಸೋಮವಾರ ನಡೆದಿದೆ.

ಅನೇಕ ದಿನಗಳಿಂದ ತಮಗೆ ಬರುತ್ತಿದ್ದ ಮಾಹಿತಿ ಆಧರಿಸಿ ತಹಶೀಲ್ದಾರ್ ರಶ್ಮಿ ಹಾಲೇಶ ದಿಢೀರ್ ದಾಳಿ ನಡೆಸಿ, ನೇತೃತ್ವದ ಅಧಿಕಾರಿಗಳ ತಂಡ ಎಲ್.ಗುಡ್ಡೇಕೊಪ್ಪ ನಿವಾಸಿ ರಾಜೇಂದ್ರ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆ ವೇಳೆ ನೂರಾರು ನಕಲಿ ಹಕ್ಕುಪತ್ರಗಳು, ಅದಕ್ಕೆ ಬೇಕಾದ ಅರಣ್ಯ ಇಲಾಖೆ ಎನ್‌ಒಸಿ, ತಾಲೂಕು ಕಚೇರಿ, ಪಂಚಾಯ್ತಿ, ಸೊಸೈಟಿ ವಿವಿಧ ಬ್ಯಾಂಕ್ ಗಳ ನಕಲಿ ಸೀಲ್ ಗಳು ಕಂಡು ಬಂದಿದ್ದು ವಶಕ್ಕೆ ಪಡೆಯಲಾಗಿದೆ.

ದಾಳಿ ಮಾಡಿ ನೂರಾರು ಹಕ್ಕುಪತ್ರ, ಖಾಲಿ ಪತ್ರಗಳು, ಅದಕ್ಕೆ ಸಂಬಂಧಿಸಿದ ಅನೇಕ ನಕಲಿವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ನಕಲಿ ಹಕ್ಕುಪತ್ರದ ಜಾಲ ಕಾರ್ಯನಿರ್ವಹಿಸುತ್ತಿದೆಯೇ.. ಎಷ್ಟು ವರ್ಷದಿಂದ ಈ ಅಕ್ರಮ ನಡೆಯುತ್ತಿದೆ. ತಾಲೂಕಿನಲ್ಲಿ ಈವರೆಗೆ ಹಂಚಿಕೆಯಾಗಿರುವ ನಕಲಿ ಹಕ್ಕುಪತ್ರಗಳ ಮಾಹಿತಿ ಇನ್ನಷ್ಟೆ ಕಲೆಹಾಕಬೇಕಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.

ದಾಳಿಯಲ್ಲಿ ಶಿರೆಸ್ತಾದಾರ ಮಂಜುನಾಥ, ಪಿಎಸ್‌ಐ ಶಂಕರಗೌಡ ಪಾಟಿಲ್, ಚಿರಾಗ್, ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ