Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕುಲಪತಿ ಪ್ರೊ.ಬಿ.ಕೆ ರವಿ ರವರಿಗೆ ಬೀಳ್ಕೊಡುಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜನವರಿ 31 ರಂದು ಬೆಂಗಳೂರು ವಿವಿಯಲ್ಲಿ ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಡಾ. ಬಿ.ಕೆ.ರವಿ ರವರು 2025 ಜನವರಿ 31 ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ

ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಸ್ಟ್ರಿಗೆ ಬೆಂಗಳೂರು ವಿವಿಯ, ಸಂವಹನ ವಿಭಾಗದ ಅಧ್ಯಾಪಕ ವೃಂದ, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ ಜನವರಿ 31 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಡಾ. ಜಯಕರ ಶೆಟ್ಟಿ ಎಂ. ಅವರು ಪ್ರೋ. ಬಿ.ಕೆ ರವಿ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನುಂ, ರವಿ ಕುಮಾರ್, ಮುಖ್ಯಸ್ಥರು, ನ್ಯೂಸ್ ಫರ್ಸ್ಟ್ ಅವರು ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೈಖ್ ಲತೀಫ್, ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಹಣಕಾಸು ವಿಭಾಗದ ಅಧಿಕಾರಿ ಡಾ. ಸುನೀತಾ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಅಧ್ಯಾಪಕರು, ಸಂವಹನ ವಿಭಾಗದ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ