LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆಯಾದ ನೌಕರರಿಗೆ ಬೀಳ್ಕೊಡುಗೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗಾವಣೆ ಗೊಂಡ ಮುಖ್ಯ ವೈದ್ಯಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಆಸ್ಪತ್ರೆ ಮುಖ್ಯ ವೈದ್ಯಧಿಕಾರಿಗಳಾದ ಡಾ. ರಮೇಶ್, ಎಲ್. ಶ್ರೀನಿವಾಸ್ ಮೂರ್ತಿ (R. T. A.), ಬಿ. ಎಲ್. ಪ್ರದೀಪ್ (ಆಡಳಿತಧಿಕಾರಿ ), ಆರ್. ಶ್ರೀನಿವಾಸ್ ಮೂರ್ತಿ ಹಾಗೂ ಮಂಜುನಾಥ್ (ಫಾರ್ಮಸಿ )ರವರು ಬೇರೆಡೆಗೆ ವರ್ಗಾವಣೆ ಯಾಗಿದ್ದು ಆಸ್ಪತ್ರೆ ಸಿಬ್ಬಂದಿ ಅವರ ಸೇವೆಯನ್ನು ಸ್ಮರಿಸಿ ಬೀಳ್ಕೊಡುಗೆ ಮೂಲಕ ಆತ್ಮೀಯವಾಗಿ ಸನ್ಮಾನಿಸಿದರು.

     ಗೌರವ ಸ್ವೀಕರಿಸಿದ ವೈದ್ಯಾಧಿಕಾರಿ ಡಾ. ರಮೇಶ್ ಮಾತನಾಡಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ 2019 ರಿಂದ ಇಲ್ಲಿಯವರೆಗೆ ಏಳು ವರ್ಷಗಳ ಸುಧೀರ್ಘ ಸೇವೆಯಲ್ಲಿ ಅವರಿಸಿದ ಕೋವಿಡ್ ಸಂದರ್ಭವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಪ್ರಮುಖವಾಗಿ ನನ್ನ ಅವಧಿಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಸೆಂಟ್ರಲ್ ಲ್ಯಾಬ್, ಕ್ಯಾನ್ಸರ್ ಚಿಕಿತ್ಸಾ ಘಟಕ, ನೇರೋ ಸೆಂಟರ್, ಬ್ಲಡ್ ಬ್ಯಾಂಕ್ ಘಟಕ, ಹಿರಿಯ ನಾಗರಿಕರ ವಾರ್ಡ್,ಐ. ಸಿ. ಯು. ಘಟಕವನ್ನು ಸಾರ್ವಜನಿಕರ ಸೇವೆಗೆ ತಂದದ್ದು ಹೆಮ್ಮೆಯ ವಿಷಯ.ನನ್ನ ಅವಧಿಯಲ್ಲಿ ಸಾರ್ವಜನಿಕರಿಕರಿಗೆ ಉತ್ತಮ ಸೇವೆ ಸಂದಿದೆ ಎಂದರೆ ಅದಕ್ಕೆ ನಮ್ಮ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯ ಸಹಕಾರ ಮುಖ್ಯ ಕಾರಣ ಹಾಗಾಗಿ ನನ್ನ ಮೆಚ್ಚಿನ ಸಿಬ್ಬಂದಿಗಳ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕರಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

    ದ್ವಿತೀಯ ದರ್ಜೆ ಸಹಾಯಕ ಎಲ್. ಶ್ರೀನಿವಾಸ ಮೂರ್ತಿ ಮಾತನಾಡಿ 2018 ರಿಂದ ಇಲ್ಲಿಯವರೆಗೆ ಸಾರ್ವಜನಿಕ ಆಸ್ಪತ್ರೆಗೆ ಸೇವೆ ಸಲ್ಲಿಸಿರುವುದು ಒಂದು ಅಪೂರ್ವ ಅನುಭವ. ನನ್ನ ಸೇವೆಯನ್ನು ಸ್ಮರಿಸಿ ನನ್ನೆಲ್ಲಾ ಸರ್ಕಾರಿ ನೌಕರರು ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷನನ್ನಾಗಿಮಾಡಿ ಗೌರವ ಸೂಚಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಹಾಗೂ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ಸಾರ್ವಜನಿಕರು, ಗಣ್ಯರು, ಸಂಘ ಸಂಸ್ಥೆಗಳ ಮುಖಂಡರು ನಮಗೆ ಸ್ಪಂದಿಸಿದ್ದಾರೆ. ಮುಖ್ಯವಾಗಿ ನಮ್ಮ ಆಸ್ಪತ್ರೆ ಸಿಬ್ಬಂದಿ ನೀಡಿದ ಸಹಕಾರವನ್ನು ನಾನು ಮರೆಯಲಾಗುವುದಿಲ್ಲ. ಹೀಗಾಗಿ ಅವರೆಲ್ಲರಿಗೂ ನಾನೂ ಅಭಾರಿಯಾಗಿದ್ದೇನೆ ಎಂದು ಹೇಳಿದರು.

    ಬೀಳ್ಕೊಡುಗೆ ಕಾರ್ಯಕ್ರಮ ದಲ್ಲಿ ಆಸ್ಪತ್ರೆ ವೈದ್ಯರು ಸಹಾಯಕ ಸಿಬ್ಬಂದಿ ಸೇರಿದಂತೆ ಹಲವಾರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ