Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರ್‍ಲಹಳ್ಳಿ ಸ್ಟೋನ್ ಕ್ರಷರ್‌ಪರವಾನಗಿ ರದ್ದುಪಡಿಸಲು ರೈತರ ಆಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮೊಳಕಾಲ್ಮುರು ತಾಲ್ಲೂಕು ಮರ್‍ಲಹಳ್ಳಿ ಗ್ರಾಮದ ರಿ.ಸ.ನಂ. ೬೭ ರಲ್ಲಿ ಸ್ಟೋನ್ ಕ್ರಷರ್‌ಗೆ ಪರವಾನಗಿ ನೀಡಿರುವುದನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.


ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಮಾತನಾಡಿ ಸ್ಟೋನ್ ಕ್ರಷರ್‌ಗೆ ಅನುಮತಿ ನೀಡಿರುವುದರಿಂದ ಪ್ರಕೃತಿ ಸಂಪತ್ತಿಗೆ ಹಾನಿಯುಂಟಾಗುತ್ತಿದೆ. ಪಶು, ಪಕ್ಷಿ, ಪ್ರಾಣಿ ಸಂಕುಲಗಳ ಜೀವಕ್ಕೆ ಅಪಾಯ ತಂದೊಡ್ಡುವುದಲ್ಲದೆ ಸುತ್ತಮುತ್ತಲಿನ ಜನಜೀವನದ ಮೇಲೆ ದುಷ್ಪರಿಣಾಮವಾಗಲಿದೆ. ನೈಸರ್ಗಿಕ ಸಂಪತ್ತನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ರಕ್ಷಿಸಬೇಕಾಗಿರುವುದರಿಂದ ಸ್ಟೋನ್ ಕ್ರಷರ್‌ಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡುತ್ತ ರಾಜ್ಯ ಸರ್ಕಾರದ ಯಾವ ಗ್ಯಾರೆಂಟಿ ಸೌಲಭ್ಯಗಳು ನಮಗೆ ಬೇಕಾಗಿಲ್ಲ. ತೊಂದರೆ ಕೊಡದೆ ನಮ್ಮ ಪಾಡಿಗೆ ನಾವು ನೆಮ್ಮದಿಯಾಗಿ ಬದುಕಲು ಬಿಟ್ಟರೆ ಸಾಕು. ಶಿವಶಕ್ತಿ ಕಂಪನಿಯವರಿಗೆ ಸ್ಟೋನ್ ಕ್ರಷರ್‌ಗೆ ಅನುಮತಿ ನೀಡಿದ್ದು, ಇಡಿ ರಾಜ್ಯಕ್ಕೆ ಪೂರೈಸುವಷ್ಟು ಜೆಲ್ಲಿ ಕಲ್ಲುಗಳು ಇಲ್ಲಿ ಸಿದ್ದವಾಗುತ್ತಿವೆ. ನಾಲ್ಕು ದಿಕ್ಕುಗಳಲ್ಲಿಯೂ ಬೆಟ್ಟ, ಗುಡ್ಡಗಳಿಂದ ಕೂಡಿರುವ ಮೊಳಕಾಲ್ಮುರು ತಾಲ್ಲೂಕಿನಲ್ಲಿರುವ ನೈಸರ್ಗಿಕ ಸಂಪತ್ತನ್ನು ನಾಶ ಮಾಡಿದರೆ ಮುಂದಿನ ಪೀಳಿಗೆ ಶಪಿಸುತ್ತಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಹೆಚ್ಚು ಮತಗಳನ್ನು ಪಡೆದು ಗೆದ್ದು ಶಾಸಕರಾಗಿರುವ ಎನ್.ವೈ.ಗೋಪಾಲಕೃಷ್ಣರವರು ಈ ಬಗ್ಗೆ ಚಕಾರವೆತ್ತದೆ ಮೌನ ವಹಿಸಿದ್ದಾರೆ. ನೆರೆಯ ಆಂಧ್ರದಿಂದ ರೌಡಿಗಳು ಇಲ್ಲಿಗೆ ಬಂದು ಬೆದರಿಕೆ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ ಅಧಿಕಾರಿಗಳು ಆಮಿಷಕ್ಕೆ ಬಲಿಯಾಗಿ ಸ್ಟೋನ್ ಕ್ರಷರ್‌ಗೆ ಅನುಮತಿ ನೀಡಿದ್ದಾರೆ. ಮೊಳಕಾಲ್ಮುರು ಸುತ್ತಮುತ್ತ ಗುಡ್ಡಗಳಲ್ಲಿ ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಮನೆಗಳಿಗೆ ಹಾನಿಯಾಗುತ್ತಿದೆಯಲ್ಲದೆ ಸಕಲ ಜೀವರಾಶಿಗಳು ಭಯದಿಂದ ಬದುಕುವಂತಾಗಿದೆ. ಕ್ರಷರ್‌ಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಮರ್‍ಲಹಳ್ಳಿ ಎಸ್.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಗೇನಾಳ್ ಎಸ್.ಆರ್.ತಿಪ್ಪೇಸ್ವಾಮಿ

ವೆಂಕಟೇಶ್, ತಿಮ್ಮಯ್ಯ, ಹಿರೇಹಳ್ಳಿ ನಾಗರಾಜ, ಪಾಪಣ್ಣ, ದಂಡಿ ಸೂರಯ್ಯ, ರಾಜ, ಬಸವರಾಜ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ