Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಸೇರಿ ವಿವಿಧ ಬೇಡಿಕೆ ಈಡೇರಿಸಲು ರೈತರ ಪ್ರತಿಭಟನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಮತದಿಂದ ಶೀಘ್ರವೇ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವುದು ಸೇರಿದಂತೆ ಹದಿನೈದು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.


ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಕೈಬಿಡಬೇಕು. ಬೋರ್‌ವೆಲ್ ಕೊರೆಸಲು ಸರ್ಕಾರ ಬೆಲೆ ನಿಗಧಿಪಡಿಸಿ ಅಧಿಕಾರಿಗಳು, ಬೋರ್‌ವೆಲ್ ಮಾಲೀಕರು ಹಾಗೂ ರೈತರನ್ನೊಳಗೊಂಡ ಸಮಿತಿ ರಚಿಸಬೇಕು. ಬ್ಯಾಂಕ್‌ಗಳು ಒತ್ತಾಯಪೂರ್ವಕವಾಗಿ ಕೃಷಿ ಸಾಲ ವಸೂಲಿ ಮಾಡುವುದನ್ನು ನಿಲ್ಲಿಸಿ ಎನ್.ಓ.ಸಿ.ಗೆ ಶುಲ್ಕ ಸಂಗ್ರಹಿಸಬಾರದೆಂದು ಪ್ರತಿಭಟನಾನಿರತ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಸಾಲ ನೀಡುವಾಗ ರೈತರನ್ನು ಸಿಬಿಲ್‌ನಿಂದ ಹೊರತುಪಡಿಸಬೇಕು. ಮೈಕ್ರೋ ಫೈನಾನ್ಸ್ ಕಂಪನಿಗಳ ಹಣಕಾಸು ವ್ಯವಹಾರದ ಮೇಲೆ ಸರ್ಕಾರಗಳು ನಿಯಂತ್ರಣ ವಹಿಸಿ ರೈತರ ಜಮೀನುಗಳ ದಾರಿ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಬೇಕು. ಪಹಣಿ ಮತ್ತು ಭೂದಾಖಲೆಗಳನ್ನು ಐದು ರೂ.ಗೆ ನೀಡಬೇಕು. ಇದನ್ನು ವ್ಯಾಪಾರವಾಗಿ ಪರಿಗಣಿಸದೆ ಸೇವೆಯಾಗಿ ಸಲ್ಲಿಸಬೇಕು. ಭೂದಾಖಲೆಗಳನ್ನು ಗಣಕೀಕೃತಗೊಳಿಸುವಾಗ ತಪ್ಪುಗಳಾದಲ್ಲಿ ಸಂಬಂಧಪಟ್ಟ ನೌಕರರನ್ನೆ ಹೊಣೆಗಾರರನ್ನಾಗಿಸಬೇಕು. ಬಗರ್‌ಹುಕಂ ಸಾಗುವಳಿದಾರರ ಅರ್ಜಿಗಳನ್ನು ಪರಿಶೀಲಿಸಿ ಸಾಗುವಳಿ ಚೀಟಿ ವಿತರಿಸಬೇಕು. ತೆಂಗಿಗೆ ಬಾಧಿಸುತ್ತಿರುವ ಕಪ್ಪುಹುಳು ಬಾಧೆಯನ್ನು ಹತೋಟಿಗೆ ತರಬೇಕು. ಕಾಲಮಿತಿಯಲ್ಲಿ ಬೆಳೆ ವಿಮೆ ನೀಡಿ ಬೆಳೆ ಪರಿಹಾರ ತಾರತಮ್ಯವನ್ನು ನಿವಾರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ರೈತ ಮುಖಂಡರುಗಳಾದ ಮರ್‍ಲಹಳ್ಳಿ ರವಿಕುಮಾರ್, ಜಿ.ಇ.ರಾಜಪ್ಪ, ರಂಗಪ್ಪ, ಬಸಪ್ಪ, ಜಿ.ತಿಪ್ಪೇಸ್ವಾಮಿ, ಪರಸಪ್ಪ, ನಿರಂಜನಮೂರ್ತಿ, ನಾಗರಾಜಪ್ಪ, ನರಸಿಂಹಪ್ಪ, ತಿಮ್ಮಾರೆಡ್ಡಿ, ಎಸ್.ಜಿ.ನಿಜಲಿಂಗಪ್ಪ

ಓಂಕಾರಪ್ಪ, ಹರಳಯ್ಯ, ಮಂಜುನಾಥ, ಬಿ.ಎಸ್.ರಂಗಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ