LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೊಳಚೆ ನೀರನ್ನು ಶುದ್ದೀಕರಿಸಲು
STP ಘಟಕ ಸ್ಥಾಪಿಸಬೇಕು. ಎಸ್‌ಟಿಪಿ ಘಟಕ ಸ್ಥಾಪಿಸುವವರೆಗೂ ಹೋರಾಟ ನಿರಂತರವಾಗಿ ಇರುತ್ತದೆ. ಸಾಂಕೇತಿಕವಾಗಿ  ಆಗಸ್ಟ್ 15ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡಲು ನಮ್ಮ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ವೇದಿಕೆಯ ಪ್ರಮುಖರಾದ ಸತೀಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯತಿಯ ನೀರು ಸಂಪೂರ್ಣ ಕಲುಷಿತಗೊಂಡಿದ್ದು ಈ ವಿಚಾರವಾಗಿ ಕಳೆದ ನಾಲ್ಕು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದೇವೆ.ಆದರೆ ಸರಕಾರ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಸರ್ಕಾರ ಕಳೆದ ಬಾರಿ ಹೋರಾಟದ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಯ ಕಚೇರಿಯಲ್ಲೂ ಸಹ ಸಭೆ ನಡೆಸಿ ಚಳುವಳಿ ಕೈಬಿಡಿ ಎರಡು ದಿನಗಳಲ್ಲಿ ನಿಮ್ಮ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ಕೊಟ್ಟರು. ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಈ ಹಿನ್ನಲೆ ನಮ್ಮ ಹೋರಾಟದ ಅಂಗವಾಗಿ ಒಂದು ದಿನದ ಸಂಕೇತಿಕ ಸತ್ಯಗ್ರಹ ಮಾಡಲು ಮುಂದಾಗಿದ್ದೇವೆ ಎಂದರು.

ವೇದಿಕೆಯ ಮುಖಂಡ ವಸಂತ್ ಕುಮಾರ್ ಮಾತನಾಡಿ  ನಮ್ಮ ಹೋರಾಟ ನಿತ್ಯ ನಿರಂತರವಾಗಿ ಸಾಗುತ್ತಿದೆ. ಮುಖ್ಯವಾಗಿ ನಗರದಿಂದ ನಮ್ಮ ಊರಿನ ಕೆರೆಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ದೀಕರಿಸಲು STP ಘಟಕ ಸ್ಥಾಪಿಸಬೇಕು ಎಂಬ ಅಗ್ರಹ ಕಳೆದ ಹಲವು ವರ್ಷಗಳಿಂದ ಮಾಡುತ್ತಿದ್ದರೂ ಈವರೆಗೂ ಯಾವ ಕಾರ್ಯ ಪ್ರಾರಂಭವಾಗಿಲ್ಲ. ಎಸ್‌ಟಿಪಿ ಘಟಕ ಸ್ಥಾಪಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ನಮ್ಮ ಹೋರಾಟ ಜೀವಂತವಾಗಿದೆ ಎಂದು ತೋರಿಸುವ ಸಲುವಾಗಿ  ಆಗಸ್ಟ್ 15ರಂದು  ನಗರದ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆ ಮುಂದೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಮಾಡಲು ಹೋರಾಟ ಸಮಿತಿ ತೀರ್ಮಾನಿಸಿದ್ದು ಈ ಮೂಲಕ ಅಧಿಕಾರಿಗಳಿಗೆ ಎಚ್ಚರಿಸುವ ಕಾರ್ಯ ಮಾಡಲಿದ್ದೇವೆ. ಎಸ್ ಟಿ ಪಿ ಘಟಕ ಸ್ಥಾಪನೆಗೆ ಸರ್ಕಾರ ಮುಂದಾಗದೆ ಇದ್ದಾರೆ ಮುಂದೆ ನಮ್ಮ ಹೋರಾಟ ಉಗ್ರ ರೂಪತಾಳಲಿದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಅರ್ಕಾವತಿ ನದಿ ಪಾತ್ರ ಸಂರಕ್ಷಣೆ ಹೋರಾಟ ಸಮಿತಿಯ ಪ್ರಮುಖರಾದ ಕಾಳೇಗೌಡ, ಅಂಜನ್ ಮೂರ್ತಿ, ರಾಮಕೃಷ್ಣ , ಅಂಜಿನಪ್ಪ, ಸುವಂತಪ್ಪ ಸೇರಿದಂತೆ ಹಲವು ರೈತ ಮುಖಂಡರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ