LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಂದೆ-ಮಗ ಶವವಾಗಿ ಪತ್ತೆ, ಕೊಲೆ ಶಂಕೆ ದೂರು ದಾಖಲು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಬಸವಪುರದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಹಾಗೂ ಅವರ ಐದು ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಕುಣಿಗಲ್ ಮೂಲದ ಅಭಿನಂದನ್ (
35) ಹಾಗೂ ಅವರ ಪುತ್ರ ಯದುವೀರ್ (5) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಅಭಿನಂದನ್ ಅವರ ಪತ್ನಿ ಹರಿಣಿ ಅವರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ ಈ ದುರಂತ ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆ:
ಪತ್ನಿಯ ಹೇಳಿಕೆ: ಸಂಬಂಧಿಕರ ಮನೆಗೆ ತೆರಳಿದ್ದ ಕುಟುಂಬ ಭಾನುವಾರ ಸಂಜೆ ಮನೆಗೆ ಮರಳಿತ್ತು. ಸೋಮವಾರ ಬೆಳಿಗ್ಗೆ ಎದ್ದು ನೋಡಿದಾಗ ಪತಿ ಮತ್ತು ಮಗ ಯಾವುದೇ ಸ್ಪಂದನೆ ಇಲ್ಲದೆ ಬಿದ್ದಿರುವುದು ಕಂಡುಬಂತು ಎಂದು ಪತ್ನಿ ಹರಿಣಿ ಪೊಲೀಸರಿಗೆ ತಿಳಿಸಿದ್ದಾರೆ.

ಸಾಕ್ಷ್ಯ ನಾಶದ ಶಂಕೆ: ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ದೇಹಗಳ ಮೇಲೆ ಸಣ್ಣಪುಟ್ಟ ಗಾಯದ ಗುರುತುಗಳು ಪತ್ತೆಯಾಗಿವೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ಫೂಟೇಜ್ ಸರಿಯಾಗಿ ಸೇವ್ ಆಗದಿರುವುದು ಕಂಡುಬಂದಿದ್ದು, ಉದ್ದೇಶಪೂರ್ವಕವಾಗಿ ಆಫ್ ಮಾಡಲಾಗಿತ್ತೇ ಎನ್ನುವ ಶಂಕೆ ವ್ಯಕ್ತವಾಗಿದೆ.

ಕೊಲೆ ಕೇಸ್ ದಾಖಲು:
ಮೃತರ ತಾಯಿ ನೀಡಿದ ದೂರಿನನ್ವಯ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ಭಾಗವಾಗಿ ಇಬ್ಬರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು
, ಮೃತರ ಪತ್ನಿ ಹರಿಣಿ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಬೆಂಗಳೂರು ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ