Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರಾ-ಬಡವನಹಳ್ಳಿ ಹೆದ್ದಾರಿಗೆ ಹಣಕಾಸು ಸ್ಥಾಯಿ ಸಮಿತಿ ಒಪ್ಪಿಗೆ

Advertisement
ಚಂದ್ರವಳ್ಳಿ ನ್ಯೂಸ್, ಶಿರಾ:
ಶಿರಾ-ಬಡವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ- ೫೯ (ಶಿರಾ ನಗರ ಪರಿಮಿತಿ) ಅಭಿವೃದ್ಧಿಗಾಗಿರೂ. ೫೬೨ ಕೋಟಿ ಮೊತ್ತಕ್ಕೆ ಹಣಕಾಸು ಸ್ಥಾಯಿ ಸಮಿತಿ ಹಸಿರು ನಿಶಾನೆ ತೋರಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ- ೫೯ (ಹೊನ್ನಾವರ-ಬಾಣಾವರ) ಹೆದ್ದಾರಿಯು ಶಿರಾ ಬಳಿ ರಾಷ್ಟ್ರೀಯ ಹೆದ್ದಾರಿ-೪೮ನ್ನು (ಪೂನಾ-ಬೆಂಗಳೂರು) ಕಿ.ಮೀ. ೧೧೬.೮೦೦ ರಲ್ಲಿ ಛೇಧಿಸಿದ್ದು, ಹೊನ್ನಾವರ-ಬಾಣಾವರ ರಾಷ್ಟ್ರೀಯ ಹೆದ್ದಾರಿಯನ್ನು ಕಿ.ಮೀ. ೩೪೭ ರಿಂದ ೩೬೭ ರವರೆಗೆ ಶಿರಾ ಪಟ್ಟಣದ ಪರಿಮಿತಿಯಲ್ಲಿ ಸುಮಾರು ೨೦ ಕಿ.ಮೀ. ಉದ್ದದ ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾರ್ಪಡಿಸಲು ೨೦೨೪-೨೫ನೇ ಸಾಲಿನ EPC mode under Annual Plan 2024-25 (Engineering, Procurement & Construction) ನಲ್ಲಿ ಅಭಿವೃದ್ಧಿ ಪಡಿಸಲು ರೂ. ೫೬೨.೫೩ ಕೋಟಿ ಅನುದಾನ ಕೋರಿ ಸಮಗ್ರ ಯೋಜನಾ ವರದಿಯನ್ನು ಹೆದ್ದಾರಿ ವಿಭಾಗದವರು ಹೆದ್ದಾರಿ ಸಚಿವಾಲಯಕ್ಕೆ ಸಲ್ಲಿಸಿದ್ದರು.

ಇತ್ತೀಚಿಗೆ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿಯವರನ್ನು ಸಂಸದರು ಭೇಟಿಯಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಸ್ಥಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಇದರ ಫಲವಾಗಿ ದೆಹಲಿಯಲ್ಲಿ ಶುಕ್ರವಾರ ನಡೆದ ಹಣಕಾಸು ಸ್ಥಾಯಿ ಸಮಿತಿ ಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಈ ಪ್ರಸ್ಥಾನವನೆಗೆ ಕ್ಲಿಯರೆನ್ಸ್ ನೀಡಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕೆಲಸಕ್ಕೆ ರೂ. ೫೬೨.೫೩ ಕೋಟಿ ಮೊತ್ತಕ್ಕೆ ಕ್ಲಿಯರೆನ್ಸ್ ನೀಡಿದ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷರು, ನೀತಿ ಆಯೋಗದ ಸಲಹೆಗಾರರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ಅಧಿಕಾರಿಗಳಿಗೆ ಹಾಗೂ ಇಲಾಖೆಯ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗೆ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಹೆದ್ದಾರಿ ಸಚಿವರಾದ ನಿತಿನ್‌ ಗಡ್ಕರಿಯವರು ರೂ. ೫೬೨.೫೩ ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಿದ್ದಾರೆ ಎಂದು ಸಂಸದರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ