Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕೋದ್ಯಮಿಗಳಿಗೆ ಆರ್ಥಿಕ ಸಾಕ್ಷರತೆ ಅಗತ್ಯ- ಜೆಡಿ ಆನಂದ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ಬ್ಯಾಂಕ್‍ನ ನೆರವಿನೊಂದಿಗೆ ಭಾರತ ಸರ್ಕಾರದ ನೇತೃತ್ವದಲ್ಲಿ RAMP ಯೋಜನೆಯಡಿ (Raising and Accelerating MSME Performance)  ಕಾರ್ಯಕ್ರಮಗಳನ್ನು ದೇಶಾದ್ಯಂತ ಕಾರ್ಯಗತಗೊಳಿಸಿದ್ದು, ಹಾಲಿ ಕೈಗಾರಿಕೋದ್ಯಮಿಗಳಿಗೆ ಹಾಗೂ ಭಾವಿ ಉದ್ಯಮದಾರರಿಗೆ ತಾಂತ್ರಿಕ ಸಾಮರ್ಥ್ಯ ವ್ಯದ್ಧಿಸುವುದು,

ತಂತ್ರಜ್ಞಾನ ಅಳವಡಿಕೆ, ಮಾರುಕಟ್ಟೆ ಪ್ರವೇಶಿಸುವಲ್ಲಿ ಸಹಾಯ ಮತ್ತು ಆರ್ಥಿಕ ಸಾಕ್ಷರತೆಯಲ್ಲಿ ಮಾರ್ಗದರ್ಶನ ನೀಡುವ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್ ಹೇಳಿದರು.


ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಟೆಕ್ಸಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೆಸಿಟಿಯು ಸಂಯುಕ್ತಾಶ್ರಯದಲ್ಲಿ ಜರುಗಿದ ಕೇಂದ್ರ ಸರ್ಕಾರದ ಯೋಜನೆಯಾದ RAMP BUSINESS DEVELOPMENT SERVICE PROVIDER (BDSP) ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಕೇಂದ್ರ ಸರ್ಕಾರದ ಆರ್‍ಎಎಂಪಿ ಯೋಜನೆಯ ಸದುಪಯೋಗವನ್ನು ಎಲ್ಲ ಉದ್ಯಮಿದಾರರು ಪಡೆದುಕೊಳ್ಳಬೇಕು ಎಂದು ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದರು.


ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಜಿ.ಡಿ.ಕೆಂಚವೀರಪ್ಪ ಮಾತನಾಡಿ, ಸರ್ಕಾರವು ಹಾಲಿ ಕೈಗಾರಿಕೋದ್ಯಮಿಗಳ ಮತ್ತು ಭಾವಿ ಕೈಗಾರಿಕೋದ್ಯಮಿಗಳ ಕಾರ್ಯಕ್ಷಮತೆ ಸುಧಾರಿಸಲು, ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ಪಡೆದು ಉದ್ಯಮ ಸ್ಥಾಪಿಸುವಲ್ಲಿ ಉತ್ತೇಜಿಸುವುದು,

ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶ ಹಾಗೂ ಈ ಕಾರ್ಯಕ್ರಮದ ಪ್ರಮುಖ ಅಂಶವಾಗಿದೆ. ಇಂತಹ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕೆಂದು ಭಾಗವಹಿಸಿದ ಉದ್ಯಮಿದಾರರಿಗೆ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಸಿಡಾಕ್ ಉಪ ನಿರ್ದೇಶಕ ಶಿವಾನಂದ ಏಲಿಗಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಬಿ.ಕೆ.ಮಂಜುನಾಥ ಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ