Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೋಬಾನೆ ಓಬಮ್ಮನವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
2023ನೇ ಸಾಲಿನ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿಗೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಸೋಬಾನೆ ಹಾಡುಗಳ ಕಲಾವಿದೆ ಓಬಮ್ಮ ಅವರು ಆಯ್ಕೆಯಾಗಿದ್ದಾರೆ.

ಮದುವೆ ನಾಮಕರಣ ಹಣ್ಣು ಮಕ್ಕಳು ಋತುಮತಿಯ ಸಂದರ್ಭಗಳಲ್ಲಿ ಹಳ್ಳಿ ಸೊಗಡಿನ ಸೋಬಾನೆ ಪದ ಜಾನಪದ ಹಾಡುವುದು ಹಿಂದಿನ ಸಾಂಪ್ರಾದಾಯಿಕ ಆಗಿತ್ತು ಅದರೆ ದಿನೆ ದಿನೆ ಕಣ್ಮರೆಯಾಗಿ ಸೋಬಾನೆ ಪದ ಜಾನಪದ ಎಂಬುದು ಮರೀಚಿಕೆಯಾಗಿದೆ  ಇಂತಹ ಹಳ್ಳಿ ಸೊಗಡಿನ ಕಲೆಗಳು ಉಳಿಸಿ ಬೆಳೆಸುವುದು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

   ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2023 ರ ಸಾಲಿನಲ್ಲಿ 30 ಜಿಲ್ಲೆಗಳಿಂದ 30 ಜಾನಪದ ಕಲಾವಿದರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಇಬ್ಬರು ಕಲಾವಿದರನ್ನು ಜಾನಪದ ತಜ್ಞ ಪ್ರಶಸ್ತಿಗೆ ಮತ್ತು ಜಾನಪದ ಪುಸ್ತಕ ತಜ್ಞ ಪ್ರಶಸ್ತಿಗೆ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.

  ದಿನಾಂಕ 24.06.2024 ರಂದು ಬೆಂಗಳೂರಿನಲ್ಲಿ ನಡೆದ ಸರ್ವ ಸದಸ್ಯರ ತೀರ್ಮಾನದಂತೆ ಜಾನಪದ ಕಲಾವಿದೆ ಪ್ರಶಸ್ತಿಗೆ ತಾಲ್ಲೂಕಿನ ನಾಗಸಂದ್ರ ಗ್ರಾಮದ ಓಬಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತದಲ್ಲಿರುವ ಸೋಬಾನೆ ಪದಗಳನ್ನು ಕುಟುಂಬದಲ್ಲಿನ ಹಿರಿಯರಿಂದ ಕಲಿತಿರುವ 67 ವರ್ಷದ ಓಬಮ್ಮ ಅವರು ಹಲವಾರು ವೇದಿಕೆಗಳಲ್ಲಿ ಸೋಬಾನೆ ಪದಗಳನ್ನು ಹಾಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆಯುವ ಜಾನಪದ ಉತ್ಸವ, ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ಷೇತ್ರದಲ್ಲಿನ ಉತ್ಸವ ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರದ ವತಿಯಿಂದ ನಡೆದ ಶಿಬಿರಗಳಲ್ಲಿ ಭಾಗವಹಿಸಿ ಸೋಬಾನೆ ಪದಗಳನ್ನು ಹಾಡಿದ್ದಾರೆ. 

  ತಾಲ್ಲೂಕು ಕಲಾವಿದರ ಸಂಘದಲ್ಲಿ ಸಕ್ರಿಯವಾಗಿರುವ ಓಬಮ್ಮ ಅವರು ಶುಭ ಸಮಾರಂಭಗಳಿಂದ ಹಿಡಿದು ಸಾವಿನ ಮನೆಯಲ್ಲಿನ ದುಖಃವನ್ನು ಮರೆಸುವವರೆಗೆ ಎಲ್ಲಾ ರೀತಿಯ ಜಾನಪದ ಗೀತೆಗಳನ್ನು ಹಾಡುವ ಅವರ ಹಾಡು ಗಾರಿಕೆಯನ್ನು ಗುರುತಿಸಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ, ದೊಡ್ಡಳ್ಳಾಪುರದ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರ ಸಾಂಸ್ಕೃತಿ ಸಮಿತಿ ವತಿಯಿಂದ ಗೌರವಿಸಲಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ