Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಸಲೇಖ ನಾಡಿನ ನಿಜವಾದ ಆಸ್ತಿ - ಮಾಜಿ ಸಚಿವ ಆಂಜನೇಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾದಬ್ರಹ್ಮ ಎಂಬ ಗೌರವಕ್ಕೆ ಪಾತ್ರರಾಗಿರುವ ಸಂಗೀತ ನಿರ್ದೇಶಕ
, ಸಾಹಿತಿ ಹಂಸಲೇಖ ಅವರು ಸಾಮಾಜಿಕ ಪಿಡುಗು ಭ್ರೂಣ ಹತ್ಯೆ ವಿರುದ್ಧ ಹೋರಾಟಕ್ಕೆ ಚಲನಚಿತ್ರದ ಮೂಲಕ ಮುಂದಾಗುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.

ಸಾಮಾಜಿಕ ಪಿಡುಗು ಆಗಿರುವ ಭ್ರೂಣಹತ್ಯೆ ಕತೆಯನ್ನಾಧರಿಸಿರುವ ಒಕೆ ಚಲನಚಿತ್ರ ಚಿತ್ರೀಕರಣಕ್ಕೆ ಸಿಎಂ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ ಬಳಿಕ, ಹಂಸಲೇಖ ಅವರನ್ನು ಆಂಜನೇಯ ಸನ್ಮಾನಿಸಿ ಮಾತನಾಡಿದರು.

ನಾಡು ಕಂಡ ಅಪರೂಪದ ಸಂಗೀತಗಾರ, ಸಂಗೀತ ನಿರ್ದೇಶಕ, ಸಾವಿರಾರು ಯುವಕರನ್ನು ಬೆಳೆಸಿರುವ ಹಂಸಲೇಖ ಅವರು 75ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಸಂದರ್ಭ ಚಿತ್ರನಿರ್ದೇಶಕರಾಗಿ ಬಡ್ತಿ ಹೊಂದುತ್ತಿರುವುದು ಸಂತಸದ ವಿಷಯ ಎಂದರು.

ನೊಂದ ಜನರ ಪರ, ಪ್ರೀತಿ-ಪ್ರೇಮ-ಮಾತೃತ್ವ ಹೀಗೆ ಪ್ರಕೃತಿ ನೀಡಿರುವ ಕೊಡುಗೆಗಳನ್ನು ಹೆಚ್ಚು ಪ್ರೀತಿಸುವ ಜೊತೆಗೆ ಅವುಗಳ ಮೇಲೆ ಹಾಡುಗಳನ್ನು ರಚಿಸಿ, ಸಂಗೀತ ನಿರ್ದೇಶನ ಮಾಡಿ ನಾಡಿನ ಜನರ ಮನಗೆದ್ದಿರುವ ಹಂಸಲೇಖ ಸಾಮಾಜಿಕ ಪಿಡುಗೆ ಭ್ರೂಣಹತ್ಯೆ ವಿರುದ್ಧ ಚಲನಚಿತ್ರದ ಮೂಲಕ ಹೋರಾಟ ಕೈಗೊಂಡಿರುವುದು ನಮ್ಮೆಲ್ಲರಿಗೂ ಆದರ್ಶ ಎಂದು ಹೇಳಿದರು.

ಎಲ್ಲ ವರ್ಗದ ಜನರ ಮನಮುಟ್ಟುವ ರೀತಿ ಹಾಡುಗಳನ್ನು ರಚಿಸಿ, ಸಂಗೀತ ನಿರ್ದೇಶನ ನೀಡಿರುವ ಹಂಸಲೇಖ ಮೊದಲ ಬಾರಿಗೆ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಅವರು ಸದಾ ಮೆಚ್ಚುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಿಂದ ಕ್ಲಾಪ್ ಮಾಡಿಸಿದ್ದು, ಚಿತ್ರ ಯಶಸ್ವಿಯಾಗಿ ಪೂರ್ಣಗೊಂಡು ನಾಡಿನ ಜನರ ಮನಗೆಲ್ಲಲಿದೆ ಎಂಬ ವಿಶ್ವಾಸ ಇದೆ ಎಂದರು.

ಸಾಹಿತಿ, ಚಿತ್ರರಂಗದ ಕಲಾವಿದರು, ಸಂಗೀತ ರಚನೆಗಾರರು ಎಲ್ಲರೂ ತಮ್ಮ ಕ್ಷೇತ್ರದ ಮೂಲಕವೇ ಸಮಾಜಕ್ಕೆ ಒಳಿತನ್ನು ಮಾಡುವ ಕೆಲಸ ಮಾಡಬೇಕು. ಅದರಲ್ಲಿ ಡಾ.ರಾಜ್‌ಕುಮಾರ್ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅವರ ಆಶಯಗಳನ್ನು ಅರಿತು ಚಲನಚಿತ್ರರಂಗದ ರಂಗದವರು ಅಳವಡಿಸಿಕೊಂಡಲ್ಲಿ ಸಮೃದ್ಧ ನಾಡು, ಜೊತೆಗೆ ಸೌಹಾರ್ದತೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಹಂಸಲೇಖ ಅವರು ಅನೇಕ ಹಾಡುಗಳನ್ನು ರಚಿಸಿ, ಸಂಗೀತ ನಿರ್ದೇಶಿಸುವ ಮೂಲಕ ಅನೇಕರ ಮನಸ್ಸಿನ ನೋವುಗಳನ್ನು ಹೊಗಲಾಡಿಸುವ ಕೆಲಸ ಮಾಡಿದ್ದು, ಅವರು ನಾಡಿನ ಜಿವಾದ ಆಸ್ತಿ ಎಂದು ಬಣ್ಣಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ