Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ ಮಾಜಿ ರಾಜ್ಯ ಅಧ್ಯಕ್ಷ ಬಿಜೆಪಿ ಸೇರ್ಪಡೆ

Advertisement
ಚಂದ್ರವಳ್ಳಿ ನ್ಯೂಸ್, ಗುವಾಹಟಿ:
ಫೆಬ್ರವರಿ 22 ರಂದು ಅಸ್ಸಾಂ ರಾಜ್ಯದ ಕಾಂಗ್ರೆಸ್‌ ಮಾಜಿ ರಾಧ್ಯಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.
ಈಶಾನ್ಯ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ಗೆ ಭಾರಿ ಹೊಡೆತ ಬಿದ್ದಿದೆ.


ಅಸ್ಸಾಂ ಬಿಜೆಪಿ ಮುಖ್ಯಸ್ಥ ದಿಲೀಪ್ ಸೈಕಾ, ಸೇರ್ಪಡೆಯ ವಿವರಗಳನ್ನು ಅಂತಿಮಗೊಳಿಸಲು ಬೋರಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಸಿಎಂ ಶರ್ಮಾ ಇದೇ ವೇಳೆ ತಿಳಿಸಿದರು.

ಭೂಪೇನ್ ಬೋರಾ ಫೆಬ್ರವರಿ 22 ರಂದು ಬಿಜೆಪಿಗೆ ಸೇರಲಿದ್ದಾರೆ. ದಿಲೀಪ್ ಸೈಕಿಯಾ ಅವರ ಜೊತೆಗೆ ಗುವಾಹಟಿ ಮತ್ತು ಉತ್ತರ ಲಖಿಂಪುರದಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಬೋರಾ ಕೊನೆಯ ಮಾನ್ಯತೆ ಪಡೆದ ಹಿಂದೂ ನಾಯಕ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಈಗಾಗಲೇ ಅವರ ಸೇರ್ಪಡೆಯನ್ನು ಅನುಮೋದಿಸಿ ಸ್ವಾಗತಿಸಿದ್ದಾರೆ.
ಭೂಪೇನ್ ಬೋರಾ ಅವರಿಗೆ ಎಲ್ಲಾ ಗೌರವ ಮತ್ತು ಘನತೆಯನ್ನು ನೀಡಲಾಗುವುದು. ಬಿಜೆಪಿಗೆ ಸೇರುವುದು ಅವರಿಗೆ ಮರಳಿ ಬಂದಂತೆ ಆಗುತ್ತದೆ ಏಕೆಂದರೆ ಅದು ಅವರಂತಹ ಅನೇಕ ಜನರನ್ನು ಹೊಂದಿರುವ ಪಕ್ಷವಾಗಿದೆ ಎಂದು ಶರ್ಮಾ ಹೇಳಿದರು.


ಬೋರಾ ಅವರು ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಆದರೆ, ಪಕ್ಷದ ಉನ್ನತ ನಾಯಕತ್ವವು ಅವರ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಅದನ್ನು ಹಿಂಪಡೆಯಲು ಮನವೊಲಿಸುವ ಪ್ರಯತ್ನ ಮಾಡಿತ್ತು. ಈ ವೇಳೆ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯವನ್ನು ಕೋರಿದ್ದರು.

ಬೋರಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದರು. ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಪಕ್ಷದ ನಾಯಕತ್ವವು ತಮ್ಮನ್ನು ನಿರ್ಲಕ್ಷಿಸುತ್ತಿದೆ ಮತ್ತು ರಾಜ್ಯ ಘಟಕದಲ್ಲಿ ತನಗೆ ಸಲ್ಲಬೇಕಾದ ಜವಾಬ್ದಾರಿ ನೀಡುತ್ತಿಲ್ಲ ಎಂದು ಹೇಳಿಕೊಂಡಿದ್ದರು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು.

ಇದಕ್ಕಿಂತ ಹೆಚ್ಚಿಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಸೂಕ್ತ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ ಎಲ್ಲಾ ವಿವರಗಳನ್ನು ನೀಡುತ್ತೇನೆ. ನಾನು ಏನನ್ನೂ ಮರೆಮಾಡುವುದಿಲ್ಲ ಮತ್ತು ರಹಸ್ಯವಾಗಿ ಯಾವುದೇ ಹೆಜ್ಜೆ ಇಡುವುದಿಲ್ಲ ಎಂದು ಅವರು ಸೋಮವಾರ ಹೇಳಿದ್ದರು. ಯಾವುದೇ ನಿರ್ದಿಷ್ಟ ವ್ಯಕ್ತಿ ಅಥವಾ ಯಾವುದೇ ವೈಯಕ್ತಿಕ ಕಾರಣದಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದೂ ಅವರು ಸ್ಪಷ್ಟ ಪಡಿಸಿದ್ದರು.

ಬೋರಾ ಅವರು 2021 ರಿಂದ 2025 ರವರೆಗೆ ಅಸ್ಸಾಂ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಸ್ಸಾಂನಲ್ಲಿ ಎರಡು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ