Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು ರಿಯಾಯಿತಿಯಲ್ಲಿ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಸರಸ್ವತಿಪುರಂ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಮಹಾತ್ಮ ಪುಲೆ ಅಧ್ಯಯನ ಕೇಂದ್ರದಲ್ಲಿ ಜಂಬೂದ್ವೀಪ ಕರ್ನಾಟಕದ ವತಿಯಿಂದ ಎಲ್ಲಾ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ KEA/KAS/KSP/ Group C ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು ರಿಯಾಯಿತಿಯಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ.

ಈಗಾಗಲೇ ಯಶಸ್ವಿ ಮೂರು ಬ್ಯಾಚ್ ಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗಿದೆ. ಈಗ ನಾಲ್ಕನೇ ಬ್ಯಾಚನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ.


ಈಗಾಗಲೇ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೋಧನಾ ಅವಧಿಯನ್ನು ಮಧ್ಯಾಹ್ನ 2 ರಿಂದ ಸಂಜೆ 5  ರವರೆಗೆ ಮತ್ತು ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಿಗದಿಪಡಿಸಲಾಗಿದೆ.


ಕೇಂದ್ರವು ಸುಸಜ್ಜಿತವಾದ ಗ್ರಂಥಾಲಯ ಹೊಂದಿದ್ದು ನುರಿತ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಪ್ರತಿ ಭಾನುವಾರ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಅಣಕು ಪರೀಕ್ಷೆಗಳನ್ನು ನಡೆಸಿ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತದೆ ಆಸಕ್ತರು ಖುದ್ದಾಗಿ ಅಥವಾ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಘಟಕರು ಕೋರಿದ್ದಾರೆ.

ವಿಳಾಸ:-
ಮಹಾತ್ಮಪುಲೆ ಅಧ್ಯಯನ ಕೇಂದ್ರ ಮೊದಲನೇ ಮುಖ್ಯ ರಸ್ತೆ ಸರಸ್ವತಿಪುರಂ ಚಳ್ಳಕೆರೆ ಗೇಟ್ ಹತ್ತಿರ ಚಿತ್ರದುರ್ಗ, ಸಂಪರ್ಕಿಸಿ 9242843504, 9740108588, 9972446430.
Apply through online link https://forms.gle/8bjR3hMKSNgDmnwG8

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ