ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೋಧಕ ಆಸ್ಪತ್ರೆ (ಸಿಎಂಸಿಆರ್ಐ) ಮತ್ತು ದಾವಣಗೆರೆ ಎಸ್.ಎಸ್. ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಗರದ ಸಿಎಂಸಿಆರ್ಐ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿ ತಿಂಗಳ ಮೊದಲನೇ ಬುಧವಾರ ಉಚಿತವಾಗಿ ಮಕ್ಕಳ ಹೃದಯ ತಪಾಸಣೆ ನಡೆಸಲಾಗುವುದು.
ಪ್ರತಿ ತಿಂಗಳ ಮೊದಲನೇ ಬುಧವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ರವರೆಗೆ ಮಕ್ಕಳ ಹೃದಯ ತಜ್ಞ ಡಾ.ಜಿ.ಎಸ್.ಅನಿಲ್ ಕುಮಾರ್ ತಪಾಸಣೆ ನಡೆಸುವರು. ಮಕ್ಕಳಲ್ಲಿ ಪದೇ ಪದೇ ಕಾಣಿಸಿಕೊಳ್ಳುವ ಸೋಂಕು ಹಾಗೂ ಚರ್ಮ ಮತ್ತು ತುಟಿಗಳು ನೀಲಿ ಬಣ್ಣಕ್ಕೆ ತಿರುಗುವುದು, ಉಸಿರಾಟದಲ್ಲಿ ತೊಂದರೆ ಅಥವಾ ಏದುಸಿರು ಬಿಡುವುದು, ಅನಿಯಮಿತ ಹೃದಯ ಬಡಿತ, ಮರುಕಳಿಸುವ ಕೆಮ್ಮುನಂತಹ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಈ ಉಚಿತ ಸೇವೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ 9535025743, 7259759982 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸಿಎಂಸಿಆರ್ಐ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.



