Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂರಿಸಿದ್ದ ಗಣಪತಿ ರಾತ್ರೋ ರಾತ್ರಿ ಕದ್ದ ಕಳ್ಳರು

Advertisement
ಚಂದ್ರವಳ್ಳಿ ನ್ಯೂಸ್, ಜಗಳೂರು:
ಗಣೇಶ ಮೂರ್ತಿಯನ್ನೇ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಯರಗಕಟ್ಟೆ ಗ್ರಾಮದಲ್ಲಿ ನಡೆದಿದೆ.

ಗಣೇಶ ಮೂರ್ತಿಗಳನ್ನು ತಂದು ಪ್ರತಿಷ್ಠಾಪಿಸಿ, ಅದ್ಧೂರಿಯಾಗಿ ಹಬ್ಬ ಆಚರಣೆ ಮಾಡಲಾಗುತ್ತಿದೆ. ಆದರೆ, ಯರಗಕಟ್ಟೆ ಗ್ರಾಮದಲ್ಲಿ ರಾತ್ರೋರಾತ್ರಿ ಗಣಪತಿ ಮೂರ್ತಿಯನ್ನೇ ಕಳವು ಮಾಡಿರುವ ಬಗ್ಗೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾತ್ರೋರಾತ್ರಿ ಕಳ್ಳತನ:
ಗ್ರಾಮಸ್ಥರೆಲ್ಲ ಸೇರಿಕೊಂಡು ಕಳೆದ ದಿನವಷ್ಟೇ ಸಂಭ್ರಮದಿಂದ ಒಟ್ಟಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ
, ಭಕ್ತಿ ಸಮರ್ಪಿಸಿದ್ದೆವು. ರಾತ್ರಿ ಪೂಜೆ ಸಲ್ಲಿಸಿದ ನಂತರ ಎಲ್ಲರೂ ತಮ್ಮ ತಮ್ಮ ಮನೆಗೆ ಹೋಗಿದ್ದರು.

ಆದರೆ,ಯಾರೂ ಇಲ್ಲದ ವೇಳೆ, ರಾತ್ರೋರಾತ್ರಿ ಕಳ್ಳರು ಗಣಪತಿ ಮೂರ್ತಿಯನ್ನು ಕಳ್ಳತನ ಮಾಡಿಕೊಂಡು ಕಾಲ್ಕಿತ್ತಿದ್ದಾರೆ.‌ಮರುದಿನ ಬೆಳಗ್ಗೆ ಗಣೇಶನಿಗೆ ಪೂಜೆ ಸಲ್ಲಿಸಲು ಟೆಂಟ್ ಬಳಿ ಬಂದಾಗ ಮೂರ್ತಿ ಕಳವು ಆಗಿರುವುದು ಬೆಳಕಿಗೆ ಬಂದಿದೆ.

ಗಣೇಶ ಇಲ್ಲದೆ ಇರುವುದನ್ನು ಕಂಡು ಜನರು ಆಘಾತಕ್ಕೆ ಒಳಗಾಗಿದ್ದಾರೆ ಎಂದು ಗ್ರಾಮದ ಮುಖಂಡರು ಅಳಲು ತೋಡಿಕೊಂಡಿದ್ದಾರೆ.

ಗಣೇಶ ಮೂರ್ತಿ ಕಳವಾದರೆ ಗ್ರಾಮಕ್ಕೆ ಒಳ್ಳೆದಾಗಲ್ಲ ಅಂತ ಅಪ್ಪ-ಪಕ್ಕದ ಊರಿನವರು ಮಾತನಾಡಿಕೊಳ್ಳುತ್ತಿರುವುದರಿಂದ ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಗಣೇಶ ಮೂರ್ತಿಯನ್ನು ಹುಡುಕಿ ಕೊಡುವಂತೆ ಹಾಗೂ ಮೂರ್ತಿಯನ್ನು ಕದ್ದ ಖದೀಮರಿಗೆ ತಕ್ಕ ಶಿಕ್ಷೆ ನೀಡುವಂತೆ ಯರಗಕಟ್ಟೆ ಗ್ರಾಮಸ್ಥರು ಜಗಳೂರು ಪೊಲೀಸ್​ ಠಾಣೆಗೆ ತೆರಳಿ, ಮನವಿ ಮಾಡಿಕೊಂಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ