Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷರ ಚುನಾವಣಾ ವೇಳಾ ಪಟ್ಟಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಸಾಲಿನ ಅವಧಿಗೆ ಚಿಕ್ಕಮಗಳೂರು ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಪ್ರಕ್ರಿಯೆ ನವೆಂಬರ್-19 ರಿಂದ ಆರಂಭವಾಗಿ ಡಿಸೆಂಬರ್-4ರವರೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಬಸವರಾಜಪ್ಪ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆಯು ದಿನಾಂಕ 19/11/2024 ರಿಂದ ಪ್ರಾರಂಭವಾಗಿ ದಿನಾಂಕ 4/12/24 ರಂದು ಮುಕ್ತಾಯವಾಗಲಿದೆ. ಚುನಾವಣಾ ವೇಳಾ ಪಟ್ಟಿ ಚಿಕ್ಕಮಗಳೂರು ಸರ್ಕಾರಿ ನೌಕರರ ಭವನ, ಚಿಕ್ಕಮಗಳೂರು ಮೂಡಿಗೆರೆ ರಸ್ತೆಯ ಸಂಘದ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ನವೆಂಬರ್-19 ರಿಂದ 27ರ ಸಂಜೆ 5ರೊಳಗೆ ನೇರವಾಗಿ ಚುನಾವಣಾಧಿಕಾರಿಗೆ/ ಸಹಾಯಕ ಚುನಾವಣಾಧಿಕರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ನವೆಂಬರ್-28 ಬೆಳಗ್ಗೆ 11 ಗಂಟೆಯಿಂದ ನಡೆಯಲಿದ್ದು ಕಛೇರಿಯ ನೋಟೀಸ್ ಬೋರ್ಡಿನಲ್ಲಿ ನಿಯಮಾನುಸಾರ ಪ್ರಕಟಿಸಲಾಗುವುದು.

ನಾಮ ಪತ್ರ ಸಲ್ಲಿಸಿದವರು ಸ್ವ-ಇಚ್ಛೆಯಿಂದ ನೇರವಾಗಿ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಇವರಿಗೆ ಲಿಖಿತವಾಗಿ ನವೆಂಬರ್-29 ಸಂಜೆ 4.30 ಗಂಟೆಯವರೆಗೆ ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ.

ಚುನಾವಣೆಯ ಕಣದಲ್ಲಿ ಉಳಿದ ಅಭ್ಯರ್ಥಿಗಳ ಹೆಸರು ಮತ್ತು ಇಲಾಖೆ ವಿವರದೊಂದಿಗೆ ಇದೇ ದಿನ ಸಂಜೆ 4.30 ಘಂಟೆಯ ನಂತರ ಸಂಘದ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್-4 ರಂದು ಬೆಳಿಗ್ಗೆ 9 ಗಂಟೆಯಿಂದ ಅಪರಾಹ್ನ 4 ಗಂಟೆಯವರಗೆ ಚಿಕ್ಕಮಗಳೂರಿನ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿ.

ಮತದಾನ ಮುಕ್ತಾಯವಾದ ನಂತರ ಮತ ಎಣಿಕೆ ನಡೆಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಆಯ್ಕೆಯನ್ನು ನಿಯಮಾನುಸಾರ ಘೋಷಿಸಿ ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಇವರನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಚುನಾವಣಾಧಿಕಾರಿ ಎಸ್‌.ವಿ.ಬಸವರಾಜಪ್ಪ (9448829822) ಮನವಿ ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ