Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಮನೆ ನಿರ್ಮಿಸಿಕೊಳ್ಳುವವರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಮನೆಗಳನ್ನು ನಿರ್ಮಿಸಿಕೊಳ್ಳುವವರಿಗೆ ಗುಡ್ ನ್ಯೂಸ್ ನೀಡಿದೆ. ಮನೆ ನಿರ್ಮಾಣ ಸಂದರ್ಭದಲ್ಲಿ ಸೆಟ್​​ ಬ್ಯಾಕ್ ಬಿಡದೆ ಮನೆ ನಿರ್ಮಿಸಲು ಅವಕಾಶ ನೀಡಲಾಗಿದೆ.


ನಗರಾಭಿವೃದ್ಧಿ ಇಲಾಖೆ ಸೆಟ್ ಬ್ಯಾಕ್​​ನಲ್ಲಿ ವಿನಾಯಿತಿ ನೀಡಿ ಮಹತ್ವದ‌ಆದೇಶ ಹೊರಡಿಸಿದೆ. ಆ ಮೂಲಕ ಬೆಂಗಳೂರು ಜನರಿಗೆ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರ ಗಿಫ್ಟ್ ನೀಡಿದೆ. ಇದರಿಂದಾಗಿ ಸೆಟ್​​ ಬ್ಯಾಕ್​​ ಬಿಡದೆ ಸಮಸ್ಯೆ ಎದುರಿಸುತ್ತಿರುವ ಮನೆ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.


ನಿಯಮಗಳಲ್ಲಿ ಬದಲಾವಣೆ:
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೆಟ್ ​ಬ್ಯಾಕ್​ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಆದೇಶಿಸಿದೆ.
ಈ ಮೊದಲು ಮನೆಗಳಿಗೆ ಸೆಟ್ ಬ್ಯಾಕ್ ಬಿಡುವ ಅವಶ್ಯಕತೆ ಇತ್ತು. ಆದರೆ ಸರ್ಕಾರ ಸೆಟ್​​ ಬ್ಯಾಕ್ ಕಡಿತ ಹಾಗೂ ವಿನಾಯಿತಿ ನೀಡಿದ್ದು
, ಕಟ್ಟಡದ ಯಾವುದಾದರೂ ಒಂದು ಬದಿಯಲ್ಲಿ ಸೆಟ್ ಬ್ಯಾಕ್ ಬಿಟ್ಟರೆ ಸಾಕು. ಉಳಿದ ಮೂರು ಕಡೆಗಳಲ್ಲಿ ಯಾವುದೇ ಸೆಟ್ ಬ್ಯಾಕ್ ಬಿಡುವ ಅನಿವಾರ್ಯ ಇಲ್ಲ.


ಎಷ್ಟು ಸೆಟ್ ಬ್ಯಾಕ್ ಬಿಡಬೇಕು?
600
ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಕೇವಲ 0.60ಮೀ ಅಂದರೆ 2 ಅಡಿಗೆ ಇಳಿಕೆ ಮಾಡಲಾಗಿದೆ.
600
ಚದರ ಅಡಿ ಇಂದು 1,500 ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ 0.70ಮೀ, ಅಂದರೆ 2.5 ಅಡಿಗೆ ಇಳಿಕೆ ಮಾಡಲಾಗಿದೆ.

1,500 ಚದರ ಅಡಿ ಇಂದ 2,500 ಚದರ ಅಡಿ ವರೆಗಿನ ಜಾಗದ ಮನೆಗಳಿಗೆ ಎಲ್ಲಾ ಬದಿಯಲ್ಲೂ ಕನಿಷ್ಠ 0.80ಮೀ ಅಂದರೆ 3 ಅಡಿ ಸೆಟ್ ಬ್ಯಾಕ್ ಬಿಡುವುದು ಕಡ್ಡಾಯ.

2,500 ಚದರ ಅಡಿಯಿಂದ 40 ಸಾವಿರ ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಜಾಗದ 8% ನಷ್ಟು ಸೆಟ್ ಬ್ಯಾಕ್ ಬಿಡುವುದು ಕಡ್ಡಾಯ.


ಈ ಮೊದಲು 40 ಸಾವಿರ ಚದರ ಅಡಿ ವರೆಗಿನ ಜಾಗದಲ್ಲಿ ಮನೆ ನಿರ್ಮಾಣಕ್ಕೆ 12% ನಷ್ಟು ಸೆಟ್ ಬ್ಯಾಕ್ ಬಿಡುವುದು ಕಡ್ಡಾಯವಿತ್ತು. ಆದರೆ ಇದೀಗ 4% ನಷ್ಟು ಸೆಟ್ ಬ್ಯಾಕ್ ಏರಿಯಾ ಕಡಿತಗೊಳಿಸಲಾಗಿದೆ. ಇದು ಸದ್ಯಕ್ಕೆ ನಗರಲ್ಲಿರುವ ಎಲ್ಲಾ ಮನೆಗಳು ಮತ್ತು ಕಟ್ಟಡಗಳಿಗೂ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ