Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಜೆಟ್‌ನಲ್ಲಿ ಘೋಷಿಸಿದ ಹೊಸ ಬಸ್‌ಗಳಿಗೆ ಅನುದಾನ ಬಿಡುಗಡೆ ಮಾಡದೆ
, ಹಳೇ ಬಸ್‌ಗಳ ಸಮರ್ಪಕ ನಿರ್ವಹಣೆ ಇಲ್ಲದೆ ಸಾರ್ವಜನಿಕರ ಜೀವದ ಜೊತೆ ಸರ್ಕಾರ ಆಟವಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

​ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ಅವರು, "ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ಹಸಿ ಹಸಿ ಸುಳ್ಳು ಹೇಳಿ 'ಕಂಬಿ ಇಲ್ಲದೆ ರೈಲು ಬಿಡುವ' ಕೆಲಸವನ್ನು ಇನ್ನಾದರೂ ನಿಲ್ಲಿಸಿ!" ಎಂದು ಜರೆದಿದ್ದಾರೆ.

​​ಅನುದಾನದ ಕೊರತೆ: ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ 400 ಹೊಸ ಬಸ್‌ಗಳಿಗೆ ಇದುವರೆಗೆ ಯಾವುದೇ ಸಮರ್ಪಕ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ.

​ನಿರ್ವಹಣೆಯ ವೈಫಲ್ಯ: ರಾಜ್ಯದ ಹಲವೆಡೆ ಹಳೆಯ ಬಸ್‌ಗಳಿಗೆ ಸರಿಯಾದ ನಿರ್ವಹಣೆ ಇಲ್ಲದಂತಾಗಿದೆ. ಇದರಿಂದಾಗಿ ಬಸ್‌ಗಳು ರಸ್ತೆ ಮಧ್ಯದಲ್ಲೇ ಕೆಟ್ಟು ನಿಲ್ಲುವುದು ಮತ್ತು ಬೆಂಕಿಗಾಹುತಿಯಾಗುವಂತಹ ಅಪಾಯಕಾರಿ ಘಟನೆಗಳು ಮರುಕಳಿಸುತ್ತಿವೆ.

​ಪ್ರಯಾಣಿಕರಲ್ಲಿ ಜೀವಭಯ: ಕೆಎಸ್‌ಆರ್‌ಟಿಸಿ ಮತ್ತು ಇತರೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಸಾರ್ವಜನಿಕರು ಪ್ರತಿದಿನ ಜೀವಭಯದಲ್ಲೇ ಪ್ರಯಾಣಿಸುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

​"ಜಾಹೀರಾತು ಮತ್ತು ಭಾಷಣಗಳಲ್ಲಿ ಅಭಿವೃದ್ಧಿ ತೋರಿಸುವ ಬದಲು, ಮೊದಲು ಜನರ ಸುರಕ್ಷತೆ ಮತ್ತು ಮೂಲಭೂತ ಸಾರಿಗೆ ವ್ಯವಸ್ಥೆಯನ್ನು ಸರಿಪಡಿಸಿ. ಜನರಿಗೆ ಬೇಕಿರುವುದು ನಿಮ್ಮ ಸುಳ್ಳಿನ ಕಂತೆ ಅಲ್ಲಸುರಕ್ಷಿತ ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆ!".
ಆರ್. ಅಶೋಕ್
, ವಿರೋಧ ಪಕ್ಷದ ನಾಯಕರು.

​ರಾಜ್ಯ ಸರ್ಕಾರದ ಉಚಿತ ಪ್ರಯಾಣ ಯೋಜನೆಗಳ ನಡುವೆಯೂ ಸಾರಿಗೆ ಸಂಸ್ಥೆಗಳ ಮೂಲಸೌಕರ್ಯ ಹಾಗೂ ಬಸ್‌ಗಳ ಸ್ಥಿತಿಗತಿ ಹದಗೆಡುತ್ತಿರುವುದನ್ನು ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ರಾಜಕೀಯ ವಾಗ್ದಾಳಿ ತೀವ್ರಗೊಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉನ್ನತ ಮಟ್ಟದ ಸಭೆ