Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಇಂದು ದಿನಾಂಕ
27-06-2026 ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517 ನೇ  ಜಯಂತಿ ಕಾರ್ಯಕ್ರಮ ಹಾಗೂ ದಿನಾಂಕ: 28-06-2026 ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು.ಪಿ.ಎಸ್ ಸೇರಿದಂತೆ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!