Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಸಮಾಜ ಸೇವೆ ಮಾಡುವ ಕುರಿಗಳಿದ್ರೆ ಖಂಡಿತ ಖರೀದಿಸುತ್ತೇವೆ- ಗೋವಿಂದ ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಸಕರಾದ ನಾವುಗಳು ಮಾರಾಟಕ್ಕೆ ಸಿದ್ದರಿದ್ದೇವೆ, ಖರೀದಿ ಮಾಡುವವರು ಬಂದು ಖರೀದಿಸಿ ಎಂದು 55 ಶಾಸಕರುಗಳು ಕೇಳುತ್ತಿದ್ದಾರೆ ಎನ್ನುವ ಮಾಹಿತಿ ನನಗಿಲ್ಲ ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು.
ಶಾಸಕ ಕಾಶಪ್ಪನವರ್ ಹೇಳಿಕೆ ವಿಚಾರಕ್ಕೆ ಸಂಸದ ಕಾರಜೋಳ
ಪ್ರತಿಕ್ರಿಯೆ ಮಾತನಾಡಿ ಯಾರ್ಯಾರು ಅಂತ ನನಗೆ ಗೊತ್ತಿಲ್ಲ, ಕಾಶಪ್ಪನವರ್ ಅವರನ್ನೇ ಕೇಳಿ. ಅವರು ಮೊದಲು 55 ಮಂದಿ ಶಾಸಕರ ಪಟ್ಟಿ ರಿಲೀಸ್ ಮಾಡಲಿ ಎಂದು ಸಂಸದರು ಆಗ್ರಹ ಮಾಡಿದರು.


ಚಿತ್ರದುರ್ಗದಲ್ಲಿ ಕುರಿ ಸಂತೆ ನಡೆಯುತ್ತದೆ. ಯೋಗ್ಯ ಕುರಿ ನೋಡಿ ಖರೀದಿಸುತ್ತಾರೆ. ಸಾರ್ವಜನಿಕ ಜೀವನದಲ್ಲಿ ಯೋಗ್ಯ, ಉತ್ತಮ ಸಮಾಜ ಸೇವೆ ಮಾಡುವ ಕುರಿಗಳಿದ್ರೆ ಖಂಡಿತ ಖರೀದಿಸುತ್ತೇವೆ ಎಂದು ಗೋವಿಂದ ಕಾರಜೋಳ ತಿರುಗೇಟು ನೀಡಿದರು.


ಸಿಗಂದೂರು ಸೇತುವೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಂಸದರು, ಇಡೀ ರಾಜ್ಯದಲ್ಲಿ 224 ಕ್ಷೇತ್ರದಲ್ಲಿ 140 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಯಾರೂ ಶಿಷ್ಟಾಚಾರ ಪಾಲಿಸಿಲ್ಲ. ನನ್ನ ಕ್ಷೇತ್ರದಲ್ಲೂ ಕೂಡಾ 198 ಕಾರ್ಯಕ್ರಮ ಮಾಡಿದ್ದಾರೆ, ನನಗೆ ಆಹ್ವಾನ ಇಲ್ಲ. ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೂ ನಾನು ಪತ್ರ ಬರೆದಿದ್ದೇನೆ. ಪ್ರೋಟೋಕಾಲ್ ಪಾಲನೆ ಪ್ರತಿಯೊಬ್ಬರ ಕರ್ತವ್ಯ ಎಂದು ಸಂಸದರು ಹೇಳಿದರು.


ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನಿಸಿಲ್ಲ ಎಂದು ಹೇಳುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲೆಯ ಶಾಸಕರು, ಜಿಲ್ಲಾ ಮಂತ್ರಿಗಳು, ಸಂಸದರು, ಶಾಸಕರುಗಳಿಗೆ ಆಹ್ವಾನಿಸಿದ್ದಾರೆ. ಶಿಷ್ಟಾಚಾರ ಇರುವುದು ಕೂಡಾ ಅಷ್ಟೇ. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದಾಗ ಸಿಎಂ ಅಧ್ಯಕ್ಷತೆ ಇರುತ್ತದೆ.

ಆಯಾ ಜಿಲ್ಲೆಯಲ್ಲಿ ಪ್ರೋಟೋ ಕಾಲ್ ಪಾಲಿಸಬೇಕು. ಸಿಎಂ ಸಿದ್ದರಾಮಯ್ಯ ಅಭಿವೃದ್ಧಿಗಿಂತ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಪತ್ರ ಬರೆದು ರಾಜಕಾರಣ ಮಾಡುವುದು ಗೌರವ ತರಲ್ಲ ಎಂದು ಸಂಸದ ಗೋವಿಂದ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ