Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷಿಗಳ ಹಸಿವು, ದಾಹ ತಣಿಸಲು ಗಿಡ ಮರಗಳಲ್ಲಿ ನೀರು, ಆಹಾರ ವ್ಯವಸ್ಥೆ ಮಾಡಿದ ಜಿಪಂ ಸಿಇಒ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಸಿಲ ಧಗೆಗೆ ಪ್ರಾಣಿ-ಪಕ್ಷಿಗಳು ಬಾಯಾರಿ ಬಳಲುತ್ತಿರುತ್ತವೆ. ಮಡಿಕೆ-ಕುಡಿಕೆಯಲ್ಲಿ ನೀರಿಡಿ. ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂಬ ಸಂದೇಶಗಳು ಬೇಸಿಗೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಿಗೆ ಬೀಳುತ್ತವೆ. ಆದರೆ ಇದನ್ನು ಅಕ್ಷರಶಃ ಕಾರ್ಯಗತಗೊಳಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಪಕ್ಷಿ ಪ್ರೇಮ ಮೆರೆದಿದ್ದಾರೆ.
ಕೋಟೆನಾಡು ಚಿತ್ರದುರ್ಗದಲ್ಲಿ ಈ ಬಾರಿ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ.  ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಿನಲ್ಲಿ ಕಂಡುಬರುತ್ತಿದ್ದ ಬಿರು ಬೇಸಿಗೆ, ಈ ಬಾರಿ ಮಾರ್ಚ್ ತಿಂಗಳಿನಲ್ಲಿಯೇ ತನ್ನ ಪ್ರತಾಪ ತೋರಲು ಆರಂಭಿಸಿದೆ.  ಈ ಹಿನ್ನಲೆಯಲ್ಲಿ ಪಕ್ಷಿಗಳ ಹಸಿವು ನೀಗಿಸುವ ಹಾಗೂ ದಾಹ ತಣಿಸುವ ಪ್ರಯತ್ನವೊಂದು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದಿದೆ.

ಬೇಸಿಗೆಯಲ್ಲಿನ ತಾಪಮಾನ ನಿಧಾನವಾಗಿ ಏರಿಕೆಯಾಗುತ್ತಿದೆ. ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಬೇಸಿಗೆಯಲ್ಲಿ ಸಾಮಾನ್ಯವಾಗಿ ಜನರೊಂದಿಗೆ ಪ್ರಾಣಿ,  ಪಕ್ಷಿಗಳು ಸಹ ಬಿಸಿಲಿನ ತಾಪಕ್ಕೆ ಸಿಲುಕಿ ಕಂಗಲಾಗುವುದು ಸಹಜ.  ಹೀಗಾಗಿ ಪ್ರಾಣಿ-ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುವುದು ಅಸಾಮಾನ್ಯವೇನಲ್ಲ.  ಮನುಷ್ಯರಿಗೆ ನೀರಡಿಕೆಯಾದರೆ ಎಲ್ಲಿಂದಾದರೂ ನೀರು ಪಡೆದು ಕುಡಿಯುತ್ತೇವೆ. ಆದರೆ ಮೂಕ ಪ್ರಾಣಿ-ಪಕ್ಷಿಗಳಿಗೆ ಎಲ್ಲಿ ನೀರು ಸಿಗುತ್ತದೆಯೋ ಎಂದು ಹುಡುಕಿಕೊಂಡು ಅಲೆದಾಡಬೇಕು.  ಬೇಸಿಗೆಯ ಬೇಗೆಯಲ್ಲಿ ಪಕ್ಷಿಗಳು ಆಹಾರ, ನೀರಿಗಾಗಿ ಅವುಗಳು ಪಡುವ ವೇದನೆ ಗಮನಿಸಿದ ಜಿ.ಪಂ ಸಿಇಒ ಮಾನವೀಯತೆ ಮೆರೆದಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಗಿಡ-ಮರಗಳಿಗೆ ಮತ್ತು ಕಾರ್ಯಾಲಯದ ಮಹಡಿ ಮೇಲೆ ತಮ್ಮ ಸ್ವಂತ ಹಣದಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತು ಹಾಕಿ, ಒಂದರಲ್ಲಿ ನೀರು, ಇನ್ನೊಂದರಲ್ಲಿ ವಿವಿಧ ಬಗೆಯ ಧಾನ್ಯ, ಕಾಳುಗಳನ್ನು ಹಾಕಿದ್ದಾರೆ. ಇದರಿಂದಾಗಿ ಪಕ್ಷಿಗಳು ಬಂದು ಆಹಾರ ತಿಂದು, ನೀರನ್ನು ಕುಡಿದು, ಹಸಿವು ಹಾಗೂ ದಣಿವು ನೀಗಿಸಿಕೊಳ್ಳುತ್ತಿದ್ದು, ಇದರಿಂದಾಗಿ ಜಿಲ್ಲಾ ಪಂಚಾಯಿತಿ ಆವರಣ ಪಕ್ಷಿಗಳ ಚಿಲಿಪಿಲಿ, ಕಲರವದಿಂದ ಕೂಡಿದೆ.

ಬೇಸಿಗೆಯಲ್ಲಿ ಜನಸಾಮಾನ್ಯರಿಗೂ ಸಹ ಕುಡಿಯುವ ನೀರಿನ ಬವಣೆ ಸಾಮಾನ್ಯ. ಇಂತಹ ಸಂದರ್ಭದಲ್ಲಿ ಪಕ್ಷಿ ಸಂಕುಲಗಳ ಪಾಡು ಹೇಳತೀರದು. ಜನರ ದುರಾಸೆಗೆ ಅನೇಕ ಪ್ರಾಣಿ ಪಕ್ಷಿ ಸಂಕುಲಗಳು ನಾಶವಾಗುತ್ತಿವೆ.  ಇಂತಹ ಸಮಯದಲ್ಲಿ ಪ್ರಾಣಿ, ಪಕ್ಷಿಗಳ ಸಂಕುಲವನ್ನು ಉಳಿಸಿ, ಬೆಳೆಸಬೇಕಾದ್ದು ಮಾನವೀಯ ಧರ್ಮವಾಗಿದೆ.  ಹೀಗಾಗಿಯೇ ಜಿ.ಪಂ. ಆವರಣದಲ್ಲಿ ಪಕ್ಷಿಗಳ ಹಸಿವು ಹಾಗೂ ನೀರಿನ ದಾಹ ನೀಗಿಸಲು ಗಿಡಮರಗಳಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತುಹಾಕಿಸಿದ್ದೇನೆ.

 ಪಕ್ಷಿಗಳು ಇದರಿಂದ ತಮ್ಮ ದಾಹ ನೀಗಿಸುವುದನ್ನು ಕಂಡಾಗ ಖುಷಿಯಾಗುತ್ತದೆ.  ಇದೇ ರೀತಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಓ ಗಳು ಮತ್ತು ಪಿಡಿಒ ಗಳು ತಮ್ಮ ವೈಯಕ್ತಿಕ ಹಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸಲು ಮುಂದಾಗಬೇಕು.  ತಮ್ಮ ಪಂಚಾಯತಿ ವ್ಯಾಪ್ತಿ ಸುತ್ತಮುತ್ತಲಿರುವ ಗಿಡ ಮರ, ಮಹಡಿಗಳ ಮೇಲೆ ಪಕ್ಷಿಗಳಿಗೆ ಒಂದಿಷ್ಟು ನೀರು ಮತ್ತು ಆಹಾರವಿನ್ನಿಡುವ ಕಾರ್ಯ ಮಾಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎನ್ನುತ್ತಾರೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ