Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಬೂಜಿ ದೇಶದ ದಕ್ಷ ಆಡಳಿತಗಾರ; ಹೆಚ್.ಆಂಜನೇಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂಬೇಡ್ಕರ್ ನಿಧನದ ಬಳಿಕ ಶೋಷಿತರು
, ಅಸ್ಪೃಶ್ಯರು, ದುರ್ಬಲರಲ್ಲಿ ಮನೆ ಮಾಡಿದ್ದ ಅನಾಥ ಪ್ರಜ್ಞೆ ದೂರಗೊಳಿಸಿ, ಅವರನ್ನು ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸಿದ ಮಹಾನ್ ನಾಯಕ ಬಾಬು ಜಗಜೀವನ ರಾಂ ಎಂದು ಮಾಜಿ ಸಚಿವ ಎಚ್.ಆಂಜನೇಯ ಸ್ಮರಿಸಿದರು.

ತಾಲೂಕಿನ ಸೀಬಾರದ ತಮ್ಮ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಬಾಬು ಜಗಜೀವನ ರಾಂ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

1956ರಲ್ಲಿ ಅಂಬೇಡ್ಕರ್ ಅಗಲಿಕೆ ದೇಶದ ಪರಿಶಿಷ್ಟ ಸಮುದಾಯದ ಜನರಲ್ಲಿ ಕತ್ತಲು ಆವರಿಸಿಕೊಂಡಿತ್ತು. ಈ ವೇಳೆ ಸಂವಿಧಾನದ ಆಶಯಗಳನ್ನು ಸರ್ಕಾರದಲ್ಲಿ ಮಂತ್ರಿಯಾಗಿದ್ದುಕೊಂಡು ಸಮರ್ಥವಾಗಿ ಅನುಷ್ಠಾನಗೊಳಿಸಿ ಜನರ ಮನಗೆದ್ದ ನಿಜನಾಯಕ ಬಾಬು ಜಗಜೀವನ ರಾಂ ಎಂದು ಬಣ್ಣಿಸಿದರು.

ಮೀಸಲಾತಿ ಅನುಷ್ಠಾನದ ಜೊತೆಗೆ ರೈಲ್ವೆ ಸೇರಿ ವಿವಿಧ ಇಲಾಖೆಯಲ್ಲಿ ಬಡ್ತಿ ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತರ ಬದುಕಿನಲ್ಲಿ ಆಶಾಕಿರಣರಾಗಿ ವಿಜೃಂಭಿಸಿದರು. ನೆಹರೂ, ಇಂದಿರಾಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವಧಿಯಲ್ಲಿ ಅನೇಕ ಖಾತೆಗಳ ಜೊತೆಗೆ ಒಮ್ಮೆ ಉಪ ಪ್ರಧಾನಿಯಾಗಿ ಆಡಳಿತ ನಡೆಸಿ ದೇಶದ ಗಮನವನ್ನೇ ತನ್ನಡೆಗೆ ಸೆಳೆದ ದಕ್ಷ ಆಡಳಿತಗಾರ ಎಂದು ಸ್ಮರಿಸಿದರು.

ಸುಧೀರ್ಘ 45 ವರ್ಷಗಳ ಸಂಸದೀಯ ಪಟು, ದಕ್ಷ ಆಡಳಿತಗಾರನಾಗಿ ಚುನಾವಣೆಯಲ್ಲಿ ಸೋಲಿಲ್ಲದ ಸರದಾರನಾಗಿ ಮೆರೆದ ಬಾಬು ಜಗಜೀವನ ರಾಂ ದೇಶದಲ್ಲಿ ಆಹಾರದ ಕೊರತೆ ಎದುರಾದ ವೇಳೆ ಹಸಿರು ಕ್ರಾಂತಿಯ ಮೂಲಕ ಹಸಿವು ನೀಗಿದ ಮಹಾತ್ಮ ಎಂದು ಹೇಳಿದರು.

ದಕ್ಷ ಆಡಳಿತಗಾರ, ಗೆಲುವಿನ ಸರದಾರ, ಉತ್ತಮ ಸಂಸದೀಯ ಪಟು ಆಗಿದ್ದ ಬಾಬು ಜಗಜೀವನ ರಾಂ ಪ್ರಧಾನಿ ಆಗಲು ಅಂದಿನ ಜಾತಿ ವ್ಯವಸ್ಥೆ ಅಡ್ಡಿಯಾಗಿದ್ದು ನೋವಿನ ವಿಷಯ. ಆದರೆ, ಅಂತಹ ಕಾಲಘಟ್ಟದಲ್ಲಿ ದಲಿತ ನಾಯಕನಿಗೆ ಎಐಸಿಸಿ ಅಧ್ಯಕ್ಷ ಸ್ಥಾನ, ಉಪ ಪ್ರಧಾನಿ, ರಕ್ಷಣಾ ಖಾತೆ, ಹೀಗೆ ವಿವಿಧ ಉನ್ನತ ಹುದ್ದೆಗಳನ್ನು ಕಾಂಗ್ರೆಸ್ ಪಕ್ಷ ನೀಡುವ ಮೂಲಕ ದಕ್ಷ ವ್ಯಕ್ತಿಗೆ ಗೌರವ ನೀಡಿತು ಎಂದರು.

ದಲಿತರ ಉದ್ಧಾರದ ಕನಸು ಕಂಡಿದ್ದ ಅವರು ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಸಮುದಾಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಶ್ರಮಿಸಿದರು. ಅವರ ಆಶಯಗಳು, ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಾಗಿದರೆ ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು. ಈ ನಿಟ್ಟಿನಲ್ಲಿ ಯುವ ಪೀಳಿಗೆ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದರು.

ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ದೇಶದ ಎರಡು ಕಣ್ಣಿದ್ದಂತೆ. ಅವರನ್ನು ನಾವು ಪ್ರತ್ಯೇಕಿಸಿ ನೋಡಲು ಸಾಧ್ಯವೇ ಇಲ್ಲ. ಇಬ್ಬರ ಚಿಂತನೆಯೂ ದೇಶ ಮತ್ತು ದಲಿತೋದ್ಧಾರ ಆಗಿತ್ತು ಎಂದರು.

ದೇಶಕ್ಕೆ ಈ ಇಬ್ಬರು ನಾಯಕರು ಅಪಾರ ಕೊಡುಗೆ ನೀಡಿದ್ದಾರೆ. ಇವರ ಸಾಧನೆಗೆ ಬೆನ್ನೆಲುಬು ಆಗಿ ನಿಂತು ತನ್ನ ಕರ್ತವ್ಯ ನಿರ್ವಹಿಸಿದ ಕಾಂಗ್ರೆಸ್ ಪಕ್ಷ ಮಾತ್ರ ದಲಿತರು, ಸಮರ್ಥರನ್ನು ಗುರುತಿಸಿ ಉನ್ನತ ಸ್ಥಾನ ಕಲ್ಪಿಸಲಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.
ಮುಖಂಡರಾದ ಅನಿಲ್ ಕೋಟಿ
, ಚೇತನ್ ಬೋರೇನಹಳ್ಳಿ ಇತರರಿದ್ದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ