LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಪರ ಕೆಲಸ ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಶಿವಕುಮಾರ್ ಎಚ್ಚರಿಕೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಜನಪರ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಟು ಎಚ್ಚರಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಮೊದಲ ಪ್ರಗತಿ ಪರಿಶೀಲನಾ ಸಭೆಯ ಪ್ರಸ್ತಾವಿಕ ಭಾಷಣದಲ್ಲಿ ಅವರು ಅಧಿಕಾರಿ ವರ್ಗಕ್ಕೆ ಈ ಖಡಕ್ ಸಂದೇಶ ರವಾನಿಸಿದ್ದಾರೆ.

"ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅತ್ಯಂತ ಕ್ರಿಯಾಶೀಲ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನಾನು ಯಾವುದೇ ನೆಪಗಳನ್ನು ಕೇಳಲು ಸಿದ್ಧನಿಲ್ಲ, ನನಗೆ ಫಲಿತಾಂಶವೇ ಮುಖ್ಯ" ಎಂದು ಸಿಎಂ ಸ್ಪಷ್ಟಪಡಿಸಿದರು.

ಬಸವಕಲ್ಯಾಣದಿಂದಲೇ ಪ್ರವಾಸ ಆರಂಭಿಸಿದ್ದೇಕೆ?:
ತಾವು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವವನು ಎಂದು ಸಾರಿದ ಮುಖ್ಯಮಂತ್ರಿಗಳು, "ಅದಕ್ಕಾಗಿಯೇ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದಲೇ ಆರಂಭಿಸಿದ್ದೇನೆ. ರಾಜ್ಯದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಮೂರೂ ಒಂದೇ ವೇಗದಲ್ಲಿ ಸಾಗಬೇಕು. ಬೀದರ್ ಹಾಗೂ ಕಲಬುರಗಿ ಜಿಲ್ಲೆಯ ಜನತೆ ನೀಡಿರುವ ಅಭೂತಪೂರ್ವ ಪ್ರೀತಿ ನಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ" ಎಂದರು.

ತಳಮಟ್ಟದಿಂದ ಬಂದವನು ನಾನು; ಆಡಳಿತದ ಹಾದಿ ಗೊತ್ತು!:
ತಮ್ಮ ಆಡಳಿತದ ಸುದೀರ್ಘ ಅನುಭವವನ್ನು ಹಂಚಿಕೊಂಡ ಸಿಎಂ, "ನಾನು ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿ ರಾಜಕೀಯ ಜೀವನ ಆರಂಭಿಸಿ, ಇಂದು ಮುಖ್ಯಮಂತ್ರಿ ಹುದ್ದೆಯವರೆಗೆ ಪ್ರತಿಯೊಂದು ಹಂತವನ್ನು ದಾಟಿಕೊಂಡು ಬಂದಿದ್ದೇನೆ. ಹೀಗಾಗಿ ಆಡಳಿತದ ಯಾವ ಹಂತದಲ್ಲಿ ಏನು ನಡೆಯುತ್ತದೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದರೆ ಜನತೆಯ ಋಣ ತೀರಿಸಿದಂತಾಗುತ್ತದೆ, ಇಲ್ಲದಿದ್ದರೆ ಕ್ರಮ ಅನಿವಾರ್ಯ" ಎಂದು ಎಚ್ಚರಿಸಿದರು.

ಮತದಾರರ ಹಕ್ಕು ರಕ್ಷಣೆಗೆ ರಾಜಿ ಇಲ್ಲ:
ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾತನಾಡಿದ ಅವರು, "ಇಲ್ಲಿ ರಾಜಕಾರಣ ಮುಖ್ಯವಲ್ಲ. ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಬಿಎಲ್‌ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

1 ಲಕ್ಷ ಕೋಟಿ ವೆಚ್ಚದ ನದಿ ಜೋಡಣೆ ಯೋಜನೆಗೆ ಒಲವು:
ರಾಜ್ಯದ ನೀರಿನ ನಿರ್ವಹಣೆ ಕುರಿತು ಮಾತನಾಡಿದ ಮುಖ್ಯಮಂತ್ರಿಯವರು, "ಅಂತಾರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತೆಲಂಗಾಣ, ಆಂಧ್ರಪ್ರದೇಶ ಸಿಎಂಗಳ ಜೊತೆ ಹಾಗೂ ಕೇಂದ್ರ ಸಚಿವರೊಂದಿಗೆ ಐತಿಹಾಸಿಕ ಚರ್ಚೆ ನಡೆಸಲಾಗಿದೆ. ಕೃಷ್ಣ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯ 1 ಲಕ್ಷ ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜಕೀಯ ಮೀರಿ ರಾಜ್ಯದ ಹಿತ ಕಾಯಲು ನಾವು ಬದ್ಧರಾಗಿದ್ದೇವೆ" ಎಂದರು.

ಸಿದ್ದರಾಮಯ್ಯ ಸರ್ಕಾರದ ಕಾಮಗಾರಿಗಳು ಮುಂದುವರಿಕೆ:
ಹಿಂದಿನ ಸರ್ಕಾರದ ಯೋಜನೆಗಳ ಕುರಿತು ಗೊಂದಲಗಳಿಗೆ ತೆರೆ ಎಳೆದ ಸಿಎಂ, "ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭಗೊಂಡಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಯಥಾವತ್ತಾಗಿ ಮುಂದುವರಿಯಲಿವೆ. ಆಡಳಿತದಲ್ಲಿ ಇನ್ನಷ್ಟು ಪಾರದರ್ಶಕತೆ ಮತ್ತು ವೇಗವನ್ನು ತರುವುದಷ್ಟೇ ನಮ್ಮ ಆದ್ಯತೆ" ಎಂದು ಪ್ರಕಟಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು