Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ ಪ್ರಕರಣ ನೋಡಲು ಪೊಲೀಸರಿದ್ದಾರೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಸರಿಯಲ್ಲ. ದ್ವೇಷ ಭಾಷಣ ಅಂತಹ ಪ್ರಕರಣಗಳನ್ನು ನೋಡಲು ಪೊಲೀಸರಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ದಳ್ಳಾಳಿಗಳಿಂದ ಹಲ್ಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಲಿ. ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?. ನೈತಿಕ ಪೊಲೀಸ್ ಗಿರಿ ಮಾಡಬಾರದು ಎಂದು ತಿಳಿಸಿದ್ದೇವೆ. ಮರಕ್ಕೆ ಕಟ್ಟಿ ಹಾಕಿ ಹೊಡೆದಿದ್ದು ಯಾರು?. ಏಕೆ ಅಂತ ಮಾಹಿತಿ ಪಡೆದು ಕ್ರಮ ತಗೋತೇವಿ ಎಂದು ಸಚಿವರು ತಿಳಿಸಿದರು.

ದತ್ತಾತ್ರೇಯ ಹೊಸಬಾಳೆ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ವಿಚಾರವಾಗಿ ಪ್ರತಿಕ್ರಿಯಿಸಿದ ಡಾ.ಪರಮೇಶ್ವರ್, ಪೊಲೀಸರು ದೂರಿನ ಬಗ್ಗೆ ಪರಿಶೀಲಿಸಿ ಕ್ರಮ ತಗೋತಾರೆ. ಕಾನೂನು ವಿರೋಧಿ ಇದೆಯಾ?. ಎಫ್ಐಆರ್ ಮಾಡಬೇಕಾ ಎಂದು ಪೊಲೀಸರು ಪರಿಶೀಲಿಸಿ ಕ್ರಮ ತಗೋತಾರೆ. ಕಾನೂನು ಬಾಹಿರ ಅನಿಸಿದರೆ ಎಫ್ಐಆರ್ ಮಾಡ್ತಾರೆ ಎಂದರು.

ಹಸು ಕೆಚ್ಚಲು ಕುಯ್ಯುವ ಪ್ರಕರಣ ಕುರಿತು ಮಾತನಾಡಿದ ಸಚಿವರು, ನಮ್ಮ ಸರ್ಕಾರ ಅವರ ಸರ್ಕಾರ ಅನ್ನೋ ಪ್ರಶ್ನೆ ಬರೋಲ್ಲ. ಸಮಾಜದಲ್ಲಿ ಇಂಥ ಘಟನೆಗಳು ನಡೆದಾಗ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ಕೃತ್ಯ ಎಸಗಿದ್ದಾರೋ ಅವರ ಮೇಲೆ ಸೂಮೋಟೋ ಕೇಸ್ ದಾಖಲಿಸಿ ಕ್ರಮ‌ ತಗೋತಾರೆ ಎಂದು ತಿಳಿಸಿದರು.

ಶಾಸಕರ ಅಸಮಾಧಾನದ ವಿಚಾರವಾಗಿ ಮಾತನಾಡಿ, ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಕಟ್ಟುನಿಟ್ಟಾಗಿ ಮಾತನಾಡದಂತೆ ಶಾಸಕರಿಗೆ ಹೇಳಬಹುದು. ರಾಜ್ಯಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆದಾಗ ಹೈಕಮಾಂಡ್ ಸರಿಪಡಿಸುತ್ತೆ. ಹಿಂದೆಯೂ ಇಲಾಖಾ ಪ್ರಗತಿ ಬಗ್ಗೆ ಹೈಕಮಾಂಡ್​ ​ನವರು ಬಂದು ಮಾಹಿತಿ ಪಡೀತಿದ್ರು. ನಮಗೆಲ್ಲ ಮಾರ್ಗದರ್ಶನ ಮಾಡೋರೇ ಹೈಕಮಾಂಡ್. ಹಾಗಂತ ಸಿಎಂ ಅವರು ಹಿಡಿತ ಕಳ್ಕೊಂಡಿದ್ದಾರೆ ಅಂತ ಅನ್ಕೋಬಾರದು. ಹೈಕಮಾಂಡ್​​ನವರು ಬಂದಾಗ ನಮ್ಮ ಆಡಳಿತ ಹೇಗಿದೆ ಅಂತ ಅರಿವಾಗುತ್ತದೆ ಎಂದು ಸಚಿವರು ಸೂಚ್ಯವಾಗಿ ತಿಳಿಸಿದರು.

ಯಾವ ಉದ್ದೇಶಕ್ಕೆ ಸುರ್ಜೇವಾಲಾ ಅವರನ್ನು ಕರೆಸಿದ್ದಾರೆ ಅಂತ ಗೊತ್ತಿಲ್ಲ. ಪಕ್ಷ ಸಂಘಟನೆ ಬಗ್ಗೆ ಸುರ್ಜೇವಾಲಾ ಮಾತಾಡಬಹುದು. ಜಿ.ಪಂ, ತಾ.ಪಂ ಚುನಾವಣೆ ಬರ್ತಿದೆ. ಅದರ ಬಗ್ಗೆ ಮಾತಾಡಬಹುದು.‌ ಕೆಲವು ಸಂದರ್ಭದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡ್ತಾರೆ. ಅದು ಅವರ ಕೆಲಸ. ಸಣ್ಣಪುಟ್ಟ ವ್ಯತ್ಯಾಸಗಳು ಬಂದಾಗ ಹೈಕಮಾಂಡ್​​ನವರು ಮಾತನಾಡುವುದು ಸಹಜ. ನಾನು ಸುರ್ಜೇವಾಲಾರ ಭೇಟಿಗೆ ಸಮಯ ಕೇಳಿದ್ದೇನೆ. ಬರುವಂತೆ ಸುರ್ಜೇವಾಲಾ ಹೇಳಿದ್ದಾರೆ. ನನ್ನ ಭೇಟಿ ವಿಚಾರ ವೈಯಕ್ತಿಕ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ