ನವದೆಹಲಿ:
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮಾತೃಶ್ರೀ ಚೆನ್ನಮ್ಮ ದೇವೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನವದೆಹಲಿಯಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ತಮ್ಮ ನಿವಾಸಕ್ಕೆ ಆಗಮಿಸಿ ಸಂತಾಪ ವ್ಯಕ್ತಪಡಿಸಿದ ಬಿ.ಎಲ್. ಸಂತೋಷ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲಕಾಲ ಮಾತುಕತೆ ನಡೆಸಿದರು.
ಕುಟುಂಬಕ್ಕೆ ಎದುರಾಗಿರುವ ದುಃಖದ ಸಂದರ್ಭದಲ್ಲಿ ಮನೆಗೆ ಭೇಟಿ ನೀಡಿ ಆದರಪೂರ್ವಕ ವಿಶ್ವಾಸ ವ್ಯಕ್ತಪಡಿಸಿದ್ದಕ್ಕಾಗಿ ಬಿ.ಎಲ್. ಸಂತೋಷ್ ಅವರಿಗೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.



