ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಮಲ್ಲೇಶ್ ಬಾಬು ಅವರ ಮಾತೃಶ್ರೀ, ಕೋಲಾರ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಂಗಮ್ಮ ಮುನಿಸ್ವಾಮಿ ಅವರು ತಮ್ಮ ಕುಟುಂಬಸ್ಥರೊಂದಿಗೆ ನವದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದರು.
ಜನತಾ ಪರಿವಾರದ ಹಿರಿಯ ಮುಖಂಡರಾಗಿರುವ ಮಂಗಮ್ಮನವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಪಕ್ಷದ ಸಂಘಟನೆಗೆ ಗಣನೀಯ ಸೇವೆ ಸಲ್ಲಿಸಿದ್ದಾರೆ.
ತಮ್ಮ ಆತ್ಮೀಯರಾದ ಸಂಸದ ಮಲ್ಲೇಶ್ ಬಾಬು ಅವರ ತಾಯಿ ಮಕ್ಕಳೊಂದಿಗೆ ಆಗಮಿಸಿ ವಾತ್ಸಲ್ಯಪೂರ್ವಕವಾಗಿ ಭೇಟಿ ನೀಡಿ ಆಶೀರ್ವದಿಸಿದ್ದು ತಮಗೆ ಅಪಾರ ಸಂತೋಷವನ್ನುಂಟು ಮಾಡಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.



