Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್.ಡಿ.ಕುಮಾರಸ್ವಾಮಿ ಶಬರಿಮಲೆ ಭೇಟಿ: ಪವಿತ್ರ 'ಪಡಿಪೂಜೆ'ಯಲ್ಲಿ ಭಾಗಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಶಬರಿಮಲೆ:
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

​ಸ್ವಾಮಿಯ ದರ್ಶನ ಪಡೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಅವರು, "ಸ್ವಾಮಿಯೇ ಶರಣಂ ಅಯ್ಯಪ್ಪ" ಎಂದು ಭಕ್ತಿ ಭಾವ ಮೆರೆದಿದ್ದಾರೆ.

​ಪವಿತ್ರ ಪಡಿಪೂಜೆಯಲ್ಲಿ ಭಾಗಿ:
​ಅಯ್ಯಪ್ಪ ಸ್ವಾಮಿ ಸನ್ನಿಧಾನದ ಅತ್ಯಂತ ಪವಿತ್ರ ಹಾಗೂ ವಿಶೇಷ ಪೂಜೆಗಳಲ್ಲಿ ಒಂದಾದ 'ಹದಿನೆಂಟು ಮೆಟ್ಟಿಲುಗಳ ಪೂಜೆ' (ಪಡಿಪೂಜೆ) ಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು. 18 ಪವಿತ್ರ ಮೆಟ್ಟಿಲುಗಳಿಗೆ ನೆರವೇರಿಸಲಾಗುವ ಈ ಮಹಾ ಪೂಜೆಯನ್ನು ಕಣ್ಣಾರೆ ಕಣ್ತುಂಬಿಕೊಂಡ ಸಚಿವರು, ಆ ಭಗವಂತನ ಸನ್ನಿಧಿಗೆ ತೆರಳುವ ದೈವ ಮಾರ್ಗವನ್ನು ಕಂಡು ಧನ್ಯತಾ ಭಾವ ಅನುಭವಿಸಿದ್ದಾಗಿ ತಿಳಿಸಿದ್ದಾರೆ.

​"ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿರುವ ಪವಿತ್ರವಾದ 'ಹದಿನೆಂಟು ಮೆಟ್ಟಿಲುಗಳು' ಪೂಜೆಯಲ್ಲಿ (ಪಡಿಪೂಜೆ) ಪಾಲ್ಗೊಂಡು ಆ ಭಗವಂತನ ಸನ್ನಿಧಿಗೆ ತೆರಳುವ ದೈವ ಮಾರ್ಗವನ್ನು ಕಣ್ತುಂಬಿಕೊಂಡೆ" ಎಂದು ಕುಮಾರಸ್ವಾಮಿ ಅವರು ಬರೆದುಕೊಂಡಿದ್ದಾರೆ.

​ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು ಹಾಗೂ ಅರ್ಚಕರು ಕೇಂದ್ರ ಸಚಿವರಿಗೆ ಶಬರಿಮಲೆಯ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಆಪ್ತರು ಉಪಸ್ಥಿತರಿದ್ದರು.

 

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!