Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯಕರ ಜೀವನ ಶೈಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರೋಗ್ಯಕರ ಜೀವನ ಶೈಲಿ ನಮ್ಮ ಜೀವನದ ಯಶಸ್ಸಿಗೆ ಅತ್ಯಂತ ಮುಖ್ಯವಾಗಿದೆ. ಉತ್ತಮ ಆರೋಗ್ಯವಿದ್ದರೆ ಮಾತ್ರ ನಾವು ಜೀವನದಲ್ಲಿ ಗುರಿಗಳನ್ನು ಸಾಧಿಸಲು ಸಾಧ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲನಯುತ ಆಹಾರ
, ನಿಯಮಿತ ವ್ಯಾಯಾಮ, ಸಮರ್ಪಕ ವಿಶ್ರಾಂತಿ ಮತ್ತು ಶುದ್ಧ ಜೀವನ ಶೈಲಿ ಅಗತ್ಯ.

ನಿಯಮಿತ ವ್ಯಾಯಾಮ ದೇಹವನ್ನು ಸದೃಢವಾಗಿರಿಸುತ್ತದೆ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವುದು, ಓಡುವುದು, ಯೋಗ ಅಥವಾ ಇತರೆ ವ್ಯಾಯಾಮಗಳನ್ನು ಮಾಡುವುದರಿಂದ ರಕ್ತಸಂಚಾರ ಸುಧಾರಿಸುತ್ತದೆ. ವ್ಯಾಯಾಮದಿಂದ ದೇಹದ ತೂಕ ನಿಯಂತ್ರಣವಾಗುತ್ತದೆ, ಸ್ನಾಯುಗಳು ಬಲವಾಗುತ್ತವೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ಮನಸ್ಸು ಉಲ್ಲಾಸವಾಗಿದ್ದು, ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ.

ಆರೋಗ್ಯಕ್ಕಾಗಿ ಸಮರ್ಪಕ ನಿದ್ರೆಯೂ ಅತ್ಯಗತ್ಯ. ಪ್ರತಿದಿನ 7 ರಿಂದ 8 ಗಂಟೆಗಳಷ್ಟು ನಿದ್ರೆ ಮಾಡುವುದರಿಂದ ದೇಹಕ್ಕೆ ವಿಶ್ರಾಂತಿ ದೊರೆಯುತ್ತದೆ. ನಿದ್ರೆ ಕೊರತೆಯಿಂದ ಆಯಾಸ, ಏಕಾಗ್ರತೆ ಕೊರತೆ ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಸಮಯಕ್ಕೆ ಮಲಗಿ ಸಮಯಕ್ಕೆ ಎದ್ದುಕೊಳ್ಳುವ ಅಭ್ಯಾಸ ಬೆಳೆಸಬೇಕು.

ವ್ಯಾಯಾಮವು ನಮ್ಮನ್ನು ಸದೃಢ ವಾಗಿ ಮತ್ತು ಬಲವಾಗಿ ಇರಿಸಿಕೊಳ್ಳಲು ಮತ್ತು ದೈನಂದಿನ ಕೆಲಸಗಳನ್ನು ಮಾಡಲು ಸಹಾಯಮಾಡುತ್ತಿದೆ. ಇದು ನಮಗೆ ತಾಜಾತನವನ್ನು ಕಾಪಾಡಿಕೊಳ್ಳಲು ಮತ್ತು ಒಳ್ಳೆಯದನ್ನು ಅನುಭವಿಸಲು ಸಹಾಯ ಮಾಡುತ್ತದೆ. ಸಮತೋಲನಯುತ ಆಹಾರ ಸೇವನೆ ಆರೋಗ್ಯಕರ ಜೀವನದ ಮತ್ತೊಂದು ಪ್ರಮುಖ ಅಂಶ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಹಾಲು, ಮೊಟ್ಟೆ ಮತ್ತು ಪೋಷಕಾಂಶಗಳಿಂದ ಕೂಡಿದ ಆಹಾರವನ್ನು ಸೇವಿಸಬೇಕು. ಅತಿಯಾದ ಜಂಕ್ ಫುಡ್, ಎಣ್ಣೆ ಪದಾರ್ಥಗಳು ಮತ್ತು ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡಬೇಕು. ಶುದ್ಧ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಕುಡಿಯುವುದು ದೇಹವನ್ನು ಆರೋಗ್ಯವಾಗಿರಿಸುತ್ತದೆ.

ಮಾನಸಿಕ ಆರೋಗ್ಯವೂ ದೈಹಿಕ ಆರೋಗ್ಯದಷ್ಟೇ ಮುಖ್ಯ. ಒತ್ತಡವನ್ನು ಕಡಿಮೆ ಮಾಡಲು ಧ್ಯಾನ, ಪ್ರಾಣಾಯಾಮ ಮತ್ತು ಧನಾತ್ಮಕ ಚಿಂತನೆ ಸಹಾಯ ಮಾಡುತ್ತದೆ. ಉತ್ತಮ ಸ್ನೇಹ, ಕುಟುಂಬದ ಸಹಕಾರ ಮತ್ತು ಸಂತೋಷಕರ ಚಟುವಟಿಕೆಗಳು ಮನಸ್ಸಿಗೆ ಶಾಂತಿಯನ್ನು ನೀಡುತ್ತವೆ.

ಒಟ್ಟಾರೆ, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ದೀರ್ಘಕಾಲ ಆರೋಗ್ಯವಾಗಿರಬಹುದು. ಉತ್ತಮ ಆಹಾರ, ವ್ಯಾಯಾಮ, ನಿದ್ರೆ ಮತ್ತು ಶಿಸ್ತುಪಾಲನೆಯಿಂದ ನಾವು ಸುಖಿ ಹಾಗೂ ಸಮೃದ್ಧ ಜೀವನ ನಡೆಸಬಹುದು.

ಲೇಖನ:ಅನುಷ್ಕಾ, 8ನೇ ತರಗತಿ, ಒನ್ ವರ್ಲ್ಡ್ ಇಂಟರ್‌ನ್ಯಾಷನಲ್ ಸ್ಕೂಲ್, ಸರ್ಜಾಪುರ, ಬೆಂಗಳೂರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ