Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲಾಸ್ಟಿಕ್ ಮತ್ತು ಕಸ ಮುಕ್ತ ಹಿರಿಯೂರು ನಗರ ಮಾಡಲು ಸಹಕರಿಸಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಪ್ರಧಾನ ರಸ್ತೆಯ ಎರಡು ಬದಿಗಳಲ್ಲಿರುವ ಮತ್ತು ಹುಳಿಯಾರ್ ರಸ್ತೆಯ ಎರಡು ಬದಿಗಳಲ್ಲಿರುವ ನೈಟ್ ಹೋಟೆಲ್ ಗಳನ್ನು ಪೌರಾಯುಕ್ತರಾದ ಎ.ವಾಸೀಂ ಅವರ ಸೂಚನೆ ಮೇರೆಗೆ ಆರೋಗ್ಯ ನೀರಿಕ್ಷಕರು ಪಾದಚಾರಿ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರಕ್ಕೆ ಬಳಸುವ ಕಲರ್, ಟೇಸ್ಟಿಂಗ್ ಪೌಡರ್, ಹೋಟೆಲ್ ಗಳ ಶುಚಿತ್ವದ ಕುರಿತು 68ಕ್ಕೂ ಹೆಚ್ಚಿನ ಹೋಟೆಲ್ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದರು.


ಪರಿಶೀಲನೆ ವೇಳೆ ರಸ್ತೆಗೆ ಕಸ ಚೆಲ್ಲಿದವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಯಿತು.
ವ್ಯಾಪಾರ ಮಾಡುವವರು ಸಾರ್ವಜನಿಕರ ಆರೋಗ್ಯ ಗಮನದಲ್ಲಿಟ್ಟುಕೊಳ್ಳಬೇಕು ಯಾವುದೇ ರೀತಿಯ ಟೇಸ್ಟಿಂಗ್ ಪೌಡರ್ ಆಗಲಿ ಅಥವಾ ಕಲರ್ ಆಗಲಿ ಬಳಸಬಾರದು
, ಹೆಚ್ಚು ಹೆಚ್ಚಾಗಿ ಸಾರ್ವಜನಿಕರು ಕಡಿಮೆ ಬೆಲೆಯೆಂದು ಫುಟ್ ಪಾತ್ ಹೋಟೆಲ್ ಗಳಿಗೆ ಬರುವುದರಿಂದ ಗುಣಮಟ್ಟದ ಆಹಾರ ನೀಡುವುದು ಕಡ್ಡಾಯವಾಗಿದೆ.


ತಳ್ಳುವ ಕೈ ಗಾಡಿಗಳಿಗೆ ಸುರಕ್ಷಿತ ಪರದೆ ಹಾಕದೆ ಓಪನ್ ಬಿಡುವುದರಿಂದ ರಸ್ತೆಯ ಧೂಳಿನ ಕಣಗಳು ಆಹಾರದ ಮೇಲೆ ಕುಳಿತು ರೋಗ ರುಜಿನಗಳು ಬರುವ ಸಾಧ್ಯತೆಗಳಿರುವುದರಿಂದ ಗ್ಲಾಸ್ ಫಿಟ್ಟಿಂಗ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಆರೋಗ್ಯ ನಿರೀಕ್ಷಕರು ಎಚ್ಚರಿಸಿದರು.


ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ಹಾಗೂ ಪ್ರಾಣಿ ಸಂಕುಲಗಳ ಮೇಲೂ ದುಷ್ಪರಿಣಾ ಬೀರುವುದರಿಂದ ಪರಿಸರ ಮಾಲಿನ್ಯ ಕೂಡ ಹೆಚ್ಚಾಗುತ್ತಿದೆ ಎಂದು ಅವರು ಎಚ್ಚರಿಸಿದರು.


ಹಿರಿಯೂರು ನಗರದ ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ ಮತ್ತು ಅಂಗಡಿ, ಹೋಟೆಲ್ ಮಾಲೀಕರುಗಳಿಗೆ ನಗರಸಭೆ ಅಧಿಕಾರಿಗಳು ವಿನಂತಿಸಿ ಸ್ವಚ್ಛತೆ ಕಾಪಾಡುವ ಮೂಲಕ ಹಿರಿಯೂರು ಕಸಮುಕ್ತ ನಗರ ಮಾಡಲು ಸಹಕರಿಸುವಂತೆ ಅವರು ಕೋರಿದರು.


ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸಂಧ್ಯಾ, ಸುನೀಲ್ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ