Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಸಿಎಂ ಆಯ್ಕೆಗೆ ಹೈಕಮಾಂಡ್ ಮುಹೂರ್ತ, ವಿಧಾನಸೌಧದಲ್ಲಿ ಪದಗ್ರಹಣಕ್ಕೆ ಭರದ ಸಿದ್ಧತೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನೂತನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ನೂತನ ನಾಯಕರನ್ನು ಆಯ್ಕೆ ಮಾಡಲು ಮೇ 30ರ ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದೆ.

ಹೈಕಮಾಂಡ್ ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣ ವಚನ!
ಬಹಿರಂಗ ಜಾಗದಲ್ಲಿ, ಅದೂ ಪ್ರಜಾಪ್ರಭುತ್ವದ ದೇಗುಲ ಎನಿಸಿಕೊಂಡಿರುವ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲೇ ಪದಗ್ರಹಣ ಮಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಅವರ ತೀವ್ರ ಆಕಾಂಕ್ಷೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ, ವಿಧಾನಸೌಧದ ಆವರಣದಲ್ಲಿ ಈಗಿನಿಂದಲೇ ಯುದ್ಧೋಪಾದಿಯಲ್ಲಿ ಪೂರ್ವ ಸಿದ್ಧತೆಗಳು ಆರಂಭವಾಗಿವೆ. ವೇದಿಕೆ ನಿರ್ಮಾಣ, ವಿವಿಐಪಿಗಳಿಗೆ ಆಸನಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಭರದಿಂದ ನಡೆಸುತ್ತಿದ್ದಾರೆ.

ಹೈ ಅಲರ್ಟ್: ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಸಭೆ
ರಾಜ್ಯದ ನೂತನ ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭಕ್ಕೆ ಗಣ್ಯಾತಿಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್​​ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಶುಕ್ರವಾರ ಉನ್ನತ ಮಟ್ಟದ ಮಹತ್ವದ ಭದ್ರತಾ ಪರಿಶೀಲನಾ ಸಭೆ ನಡೆದಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಲಾಗಿದೆ.

ಮುಂದಿನ ನಡೆ: ಶನಿವಾರ ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದು, ಆ ಬೆನ್ನಲ್ಲೇ ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಯಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!