Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

​ ದೊಡ್ಡ ಗುರಿ ಇದ್ದಾಗ ಮಾತ್ರ ಉನ್ನತ ಶಿಕ್ಷಣ ಕಲಿಯಲು ಸಾಧ್ಯ- ಎಲೆರಾಂಪುರ ಮಠದ ಡಾ. ಹನುಮಂತನಾಥ ಸ್ವಾಮೀಜಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಗುಬ್ಬಿ:​
ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧನೆ ಮಾಡುವ ದೊಡ್ಡ ಗುರಿ ಇದ್ದರೆ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಮಠದ ಡಾ. ಹನುಮಂತನಾಥ ಸ್ವಾಮೀಜಿ ಹೇಳಿದರು.

​ನಗರದ ಬಿ.ಜಿ. ಪಾಲಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

​​ಉನ್ನತ ಶಿಕ್ಷಣದ ಹಾದಿ: "ನಮ್ಮಲ್ಲಿ ದೊಡ್ಡ ಗುರಿ ಇದ್ದಾಗ ಮಾತ್ರ ಉನ್ನತ ಶಿಕ್ಷಣವನ್ನು ಕಲಿಯಲು ಮತ್ತು ಸಾಧನೆ ಮಾಡಲು ಸಾಧ್ಯ. ಸಮಾಜ ಸುಧಾರಣೆ ಇಂದಿನ ದಿನಗಳಲ್ಲಿ ಅತ್ಯಂತ ಪ್ರಮುಖವಾಗಿದೆ" ಎಂದು ಸ್ವಾಮೀಜಿ ತಿಳಿಸಿದರು.

​ಬದಲಾದ ಕಾಲಘಟ್ಟ: ಹಿಂದೆ ಶಿಕ್ಷಣ ಪಡೆಯುವುದು ಅತ್ಯಂತ ಕಷ್ಟಕರವಾಗಿತ್ತು. ಆದರೆ ಇಂದು ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಾಕಷ್ಟು ನೆರವು ನೀಡುತ್ತಿವೆ. ಸಮಾಜದ ಪ್ರತಿಯೊಬ್ಬರೂ ಅಭಿವೃದ್ಧಿಯಾಗಬೇಕಾದರೆ ಪರಸ್ಪರ ಸಹಕಾರ ಮತ್ತು ಸಮುದಾಯದ ಪ್ರಗತಿ ಅತ್ಯಗತ್ಯ.

​ಪೋಷಕರ ಜವಾಬ್ದಾರಿ: ಇಂದಿನ ಮಕ್ಕಳಿಗೆ ಸೌಲಭ್ಯಗಳ ಕೊರತೆಯಿಲ್ಲ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ಅವರ ಕಷ್ಟವನ್ನು ಅರಿತು ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಹೆಜ್ಜೆ ಇಡಬೇಕು.

news_1779147558_0_283.webp

 

​​ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಮತ್ತಷ್ಟು ಪ್ರೇರಣೆ ನೀಡುತ್ತವೆ. ಸಮಾಜದ ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

​ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಬೇತೂರು ಪಾಳ್ಯ ಜೆ.ರಾಜು ಸಮಾರಂಭದಲ್ಲಿ ಮಾತನಾಡಿ ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಮೂಡಿಸಿಕೊಳ್ಳಬೇಕೆಂದು ಉತ್ತೇಜನ ನೀಡಿದರು.
ತಾಲ್ಲೂಕು ಕೆಂಚೇಗೌಡರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಜಿ.
, ಉಪಾಧ್ಯಕ್ಷ ಟಿ.ಆರ್ ರಂಗನಾಥ್, ಸಮುದಾಯದ ಪ್ರಮುಖರಾದ ಡಾ. ಬಿ.ಜಿ ರವೀಂದ್ರನಾಥ್, ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಸುಧಾಕರ್ ಎಸ್. ಸೇರಿದಂತೆ ಹಲವು ಗಣ್ಯರು ಹಾಗೂ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

​ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮತ್ತು ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!