Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರು ಉಪಚುನಾವಣೆ: ಬಿಎಸ್ಪಿ ಅಭ್ಯರ್ಥಿಯಾಗಿ ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀನಿವಾಸ್ ಸ್ಪರ್ಧೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು: 
ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಭ್ಯರ್ಥಿಯಾಗಿ ಸಾಮಾಜಿಕ ಹೋರಾಟಗಾರ ಹಾಗೂ ಪಕ್ಷದ ಜಿಲ್ಲಾ ಸಂಯೋಜಕ ಕೆ.ಪಿ.ಶ್ರೀನಿವಾಸ್ ಅವರನ್ನು ಕಣಕ್ಕಿಳಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬಿಎಸ್ಪಿ ತಾಲ್ಲೂಕು ಮಟ್ಟದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡಲು ಘೋಷಿಸಲಾಯಿತು.

ಪಕ್ಷದ ನೂತನ ಪದಾಧಿಕಾರಿಗಳ ಆಯ್ಕೆ:
ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತಾಲ್ಲೂಕು ಮತ್ತು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ತಾಲ್ಲೂಕು ಯುವ ಘಟಕದ ಅಧ್ಯಕ್ಷ ದೊರೇಶ್ ಈಶ್ವರಗೆರೆ, ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಹಿರಿಯೂರು, ನಗರ ಘಟಕದ ಕಾರ್ಯದರ್ಶಿಗಳಾದ ಮಂಜು ದಿಂಡಾವರ, ರಂಗಸ್ವಾಮಿ ಕಳವಿಬಾಗಿ, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮಮ್ಮ, ಮುಖಂಡರಾದ ನವೀದ್, ಭೀಮನಕೆರೆ ಶಿವಮೂರ್ತಿ, ಜಿಲ್ಲಾ ಅಧ್ಯಕ್ಷ ಬಾ.ಎನ್.ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತರಾಯ ಬ್ಯಾಡರಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಮಹಾಲಿಂಗಪ್ಪ ಉಪ್ಪಳಗೆರೆ, ಜಿಲ್ಲಾ ಖಜಾಂಚಿ ಶ್ರೀನಿವಾಸ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಹನಾ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷೆ ಮೀರಾ ಉಪಸ್ಥಿತರಿದ್ದರು.

ಇವರೊಂದಿಗೆ ಹಿರಿಯೂರು ತಾಲ್ಲೂಕು ಉಸ್ತುವಾರಿ ರಾಘವೇಂದ್ರ ಈಶ್ವರಗೆರೆ, ತಾಲ್ಲೂಕು ಅಧ್ಯಕ್ಷ ಎಂ.ಜಗದೀಶ್, ಉಪಾಧ್ಯಕ್ಷ ಚಂದ್ರಣ್ಣ, ಖಜಾಂಚಿ ರಂಗಸ್ವಾಮಿ ಹುಚ್ಚವ್ವನಹಳ್ಳಿ, ಕಾರ್ಯದರ್ಶಿ ಕದುರಪ್ಪ ಶಿಡ್ಲಯನಕೋಟೆ, ಮಹೇಶ್ ಕಾಟನಾಯಕನಹಳ್ಳಿ, ಶಿವು ಖಂಡೇನಹಳ್ಳಿ, ಯೋಗೇಶ್ ಖಂಡೇನಹಳ್ಳಿ (ಮಾಜಿ ಸೈನಿಕರು) ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.