ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ. ಕೆ. ಹರಿಪ್ರಸಾದ್ ಅವರಿಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಹಿರಿಯೂರು ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ನೇತೃತ್ವದಲ್ಲಿ ಆತ್ಮೀಯವಾಗಿ ಅಭಿನಂದಿಸಿದರು.
ಪಕ್ಷದ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೂಗುಚ್ಛ ನೀಡಿ, ಶಾಲು ಹೊದಿಸಿ ಅದ್ಧೂರಿಯಾಗಿ ಬರಮಾಡಿಕೊಂಡರು. ಪಕ್ಷವನ್ನು ಮುಂಬರುವ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅವರ ನೇತೃತ್ವ ಪ್ರಮುಖ ಪಾತ್ರ ವಹಿಸಲಿದೆ ಎಂದು ಈ ಸಂದರ್ಭದಲ್ಲಿ ಹಿರಿಯ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
ಕೆಪಿಸಿಸಿ ಉಪಾಧ್ಯಕ್ಷ ಆರ್. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ. ಎಸ್. ಸಾದತ್ ಉಲ್ಲಾ, ಕಾಂಗ್ರೆಸ್ ಮುಖಂಡ ಸೂರ್ಯೋದಯ ಅಜೀಜ್, ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಜಿ. ದಾದಾಪೀರ್, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಸೈಫುಲ್ಲ ಸೇರಿದಂತೆ
ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.



