Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರು ತಾಲ್ಲೂಕು ಕೃಷಿಕ ಸಮಾಜ ಚುನಾವಣೆ ಫಲಿತಾಂಶ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಕೃಷಿಕ ಸಮಾಜಕ್ಕೆ ೨೦೨೪-೨೫ ರಿಂದ ೨೦೨೯-೩೦ರ ವರಗೆ ಕಾರ್ಯಕಾರಿ ಸಮಿತಿಯ ಚುನಾವಣೆ ಘೋಷಣೆಯಾಗಿದ್ದು
, ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಗೆ ೧೫ ಜನ ಸದಸ್ಯರನ್ನು ಚುನಾವಣಾ ಮೂಲಕ ಆಯ್ಕೆ ಮಾಡಬೇಕಾಗಿದೆ.

ತಾಲ್ಲೂಕು ಕೃಷಿಕ ಸಮಾಜದ ಅಜೀವ ಸದಸ್ಯರಿಂದ ೫೩ ಉಮೇದುವಾರಿಕೆ ಪತ್ರಗಳನ್ನು ಸ್ವೀಕರಿಸಲಾಗಿತ್ತು. ಡಿ.೦೭ರಂದು ನಾಮಪತ್ರ ಪರಿಶೀಲಿಸಿ ೧ ನಾಮಪತ್ರವು ತಿರಸ್ಕೃತಗೊಂಡು ೫೨ ಸದಸ್ಯರ ನಾಮಪತ್ರ್ರಗಳು ಅಂಗೀಕರವಾಗಿರುತ್ತದೆ. ಡಿ.೦೯ ೫೨ ಸದಸ್ಯರಲ್ಲಿ ೩೭ ಸದಸ್ಯರು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದಿರುತ್ತಾರೆ.

ಅಂತಿಮವಾಗಿ ೧೫ ಜನ ಸದಸ್ಯರು ಚುನಾವಣಾ ಕಣದಲ್ಲಿ ಉಳಿದಿರುತ್ತಾರೆ. ಡಿ.೧೫ರಂದು ಚುನಾವಣೆ ನಡೆಯಬೇಕಾಗಿದ್ದು, ಅಂತಿಮವಾಗಿ ೧೫ ಜನ ಚುನಾವಣಾ ಕಣದಲ್ಲಿ ಉಳಿದಿದ್ದು ಆ ಸದಸ್ಯರುಗಳನ್ನು ೨೦೨೪-೨೫ ರಿಂದ ೨೦೨೯-೩೦ರ ವರಗಿನ ತಾಲ್ಲೂಕು ಕೃಷಿಕ ಸಮಾಜದ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರೆಂದು ಚುನಾವಣಾಧಿಕಾರಿ ಎಂ.ವಿ ಮಂಜುನಾಥ್ ಘೋಷಣೆ ಮಾಡಿರುತ್ತಾರೆ.

ಕೃಷಿಕ ಸಮಾಜದ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜೆ ಮಧುಸೂಧನ್, ಆರ್. ವಿಶ್ವನಾಥ, ಎನ್. ಕಾಮರಾಜ್, ಮಹಮದ್ ಫಕೃದ್ದೀನ್,

ಎಂ.ಎ ಶ್ರೀನಿವಾಸ, ಸಿ.ಹೆಚ್ ಕಾಂತರಾಜ್, ಪಿ.ಎಸ್ ಪಾತಯ್ಯ, ಎಂ.ಡಿ ರವಿ, ನಾಗಮ್ಮ,  ಹೆಚ್.ಆರ್ ತಿಮ್ಮಯ್ಯ, ಹೆಚ್. ತಿಪ್ಪೇಸ್ವಾಮಿ, ಕೆ. ಜಗದೀಶ್ ಕಂದಿಕೆರೆ, ಎಂ. ಜಯರಾಮಪ,  ಬಿ. ಅನ್ನಪೂರ್ಣ, ಪಿ.ಎಂ ತಿಮ್ಮಯ್ಯ ಆಯ್ಕೆಯಾಗಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ