Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 27ರಿಂದ ಹೊಸೂರಾಂಭದೇವಿ, ಬೀರಲಿಂಗೇಶ್ವರ ಹಾಗೂ ವೆಂಕಟರಮಣಸ್ವಾಮಿ ಬೃಹತ್ ಜಾತ್ರಾ ಮಹೋತ್ಸವ

Advertisement

ಚಂದ್ರವಳ್ಳಿ ನ್ಯೂಸ್, ಕಣಜನಹಳ್ಳಿ:
ಜಿಲ್ಲೆಯ ಹಿರಿಯೂರು ತಾಲೂಕಿನ ಕಣಜನಹಳ್ಳಿಯಲ್ಲಿ ಶ್ರೀ ಹೊಸೂರಾಂಭದೇವಿ
, ಬೀರಲಿಂಗೇಶ್ವರ ಹಾಗೂ ವೆಂಕಟರಮಣಸ್ವಾಮಿ ದೇವರ ದೊಡ್ಡ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಏಪ್ರಿಲ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ.

ಧಾರ್ಮಿಕ ಕಾರ್ಯಕ್ರಮಗಳ ವಿವರ:
ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದ್ದು
, ಪ್ರಮುಖ ಕಾರ್ಯಕ್ರಮಗಳು ಹೀಗಿವೆ:

ಏಪ್ರಿಲ್ 27 (ಸೋಮವಾರ): ಕಳಸ ಪ್ರತಿಷ್ಠಾಪನೆ, ಮಹಾಗಣಪತಿ ಪೂಜೆ, ಪುಣ್ಯಾಹ ಹಾಗೂ ನವಗ್ರಹ ಪೂಜೆ ನಡೆಯಲಿದೆ. ಲಿಂಗದ ಬೀರೇಶ್ವರ ಸ್ವಾಮಿಗೆ ಜಲಾಧಿವಾಸ, ಕ್ಷೀರಾಧಿವಾಸ ಮತ್ತು ಪ್ರಾಣ ಹೋಮದ ನಂತರ ಪ್ರತಿಷ್ಠಾಪನೆ ನಡೆಯಲಿದೆ. ಬಳಿಕ ದೇವಿ ಮತ್ತು ವೆಂಕಟರಮಣ ದೇವರ ಉತ್ಸವ ಜರುಗಲಿದೆ.

ಏಪ್ರಿಲ್ 28 (ಮಂಗಳವಾರ): ದೇವಸ್ಥಾನದ ಬಳಿ ಕಳಸ ಸ್ಥಾಪನೆ, ಭಕ್ತರಿಂದ ಹರಕೆ ಸಮರ್ಪಣೆ, ಜವಳ ಹಾಗೂ ಆರತಿ ಕಾರ್ಯಕ್ರಮಗಳು ನಡೆಯಲಿವೆ. ಏಪ್ರಿಲ್ 29 (ಬುಧವಾರ): ಮಿಥುನ ಲಗ್ನದಲ್ಲಿ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ಹೆಣ್ಣು ಮಕ್ಕಳಿಗೆ ಬಾಗಿನ ವಿತರಿಸುವ ಕಾರ್ಯಕ್ರಮದೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸಾಂಸ್ಕೃತಿಕ ಸೌರಭ:
ಭಕ್ತರ ಮನರಂಜನೆಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 27ರ ರಾತ್ರಿ: ಕೀರ್ತನಕಾರ ಶಿವಾರ ಉಮೇಶ್ ಅವರಿಂದ ಗೀತ ಗಾಯನ.
28ರ ರಾತ್ರಿ:
'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಕಲಾವಿದರಿಂದ ಹಾಸ್ಯ ಮತ್ತು ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಗಣ್ಯರ ಉಪಸ್ಥಿತಿ:
ಈ ಧಾರ್ಮಿಕ ಸಂಭ್ರಮಕ್ಕೆ ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗ ಕನಕ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.

ಅಭಿವೃದ್ಧಿಯ ಸಂಕಲ್ಪ: "ಈಗಾಗಲೇ ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹಗಳು ನಡೆಯುವಂತೆ ವ್ಯವಸ್ಥೆ ಮಾಡಿ, ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು," ಎಂದು ದೇವಸ್ಥಾನ ಸಮಿತಿಯ ಗುಡಿಗೌಡರಾದ ಟಿ. ಒಂಟೇಗೌಡ ಅವರು ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವುಬಡಪ್ಪನಕಟ್ಟೆ  ಕಥೆ ಭಾಗ-5: ಕುಮಾರ್ ಬಡಪ್ಪಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ; ನಾಯಕತ್ವ ಬದಲಾವಣೆಗೆ ಶಿವಕುಮಾರ್ ಮಾರ್ಮಿಕ ನುಡಿಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ಮೇ 2ಕ್ಕೆ ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭಟಿಸಿಎಸ್ ವರ್ಲ್ಡ್ 10K ಮ್ಯಾರಥಾನ್: ದಾಖಲೆ ಬರೆದ ಕ್ವಿಜೆರಾ; ಸಂಜೀವನಿ ಜಾಧವ್‌ಗೆ ಹ್ಯಾಟ್ರಿಕ್ ಸಾಧನೆಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ3ನೇ ಬಾರಿಯೂ ತಪ್ಪಿದ ವಿಮಾನದ ಸಕಾಲಿಕ ಲ್ಯಾಂಡಿಂಗ್; ಆಕಾಶದಲ್ಲೇ 40 ನಿಮಿಷ ಸುತ್ತಾಡಿದ ಪ್ರಯಾಣಿಕರು!ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90.47 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ