Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೋಟೆಲ್, ಬೇಕರಿ ಹಾಗೂ ಅಂಗಡಿಗಳ ಮೇಲೆ ದಿಢೀರ್ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿನ ಹೋಟೆಲ್, ಬೇಕರಿ ಹಾಗೂ ಅಂಗಡಿಗಳ ಮೇಲೆ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಸರುಲ್ಲಾ ಹಾಗೂ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ ಪರಿಶೀಲಿಸಿತು.
ವೇಳೆ ಅಂಗಡಿಗಳಲ್ಲಿ ಸ್ವಚ್ಛತೆ ಇಲ್ಲದಿರುವುದು. ಅಸುರಕ್ಷತವಾಗಿ ತೆರೆದಿಟ್ಟ ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿತು.

ಅಂಗಡಿಗಳಿಂದ ಕಟ್ಟುಹೋದ ಆಹಾರ ಪದಾರ್ಥಗಳು ಹಾಗೂ ನಿಷೇಧಿಸಿದ ಪಾಸ್ಟಿಕ್ಗಳನ್ನು ನಗರ ಸಭೆ ಅಧಿಕಾರಿಗಳು ವಶಪಡಿಸಿಕೊಂಡರು. ಮಾಲಿಕರಿಗೆ ದಂಡ ವಿಧಿಸಿ ತಾಜಾ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವಂತೆ ಅಧಿಕಾರಿಗಳು ತಿಳಿ ಹೇಳಿದರು.

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶಾಮ್ಭಟ್ ಅವರ ತಂಡ ಮಾರ್ಚ್ 27 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗಡಿ ಬೇಕರಿಗಳಲ್ಲಿ ಅವಧಿ ಮುಗಿದ ತಂಪುಪಾನೀಯಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದನ್ನು ಸ್ಮರಿಸಬಹುದು.

ಬಸ್ ನಿಲ್ದಾಣದ ಕೆಲವು ಅಂಗಡಿಗಳಲ್ಲಿ ಪ್ರಯಾಣಿಕರಿಗೆ ಕಳೆಪೆ ಗುಣಮಟ್ಟ ಕುಡಿಯುವ ನೀರಿನ ಬಾಟೆಲ್ಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಸ್ ನಿಲ್ದಾಣ ಸಾರ್ವಜನಿಕ ಸ್ಥಳವಾಗಿದ್ದು, ತಂಬಾಕು ನಿಷೇಧಿತ ಪ್ರದೇಶವಾಗಿದೆ. ಆದಾಗ್ಯೂ ಕೆಲ ಅಂಗಡಿಗಳಲ್ಲಿ ಬಿಡಿ, ಸಿಗರೇಟು ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ. ಬಗ್ಗೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಗಮನಕ್ಕೆ ತಂದರು ಅಧಿಕಾರಿಗಳು ಬೇಜಬ್ದಾರಿ ತೋರುತ್ತಾರೆಎಂದು ಪ್ರಯಾಣಿಕ ಎಸ್.ಪ್ರದೀಪ್ ಬೇಸರ ವ್ಯಕ್ತಪಡಿಸಿದ್ದಾರೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಭೇಟಿ ನೀಡಿದ ನಂತರ ಬಸ್ ನಿಲ್ದಾಣದಲ್ಲಿ ಸ್ಪಲ್ಪ ಮಟ್ಟಿನ ಸ್ವಚ್ಚತೆ ಕಾಪಾಡಿಕೊಳ್ಳಲಾಗುತ್ತಿದೆ. ಆದರೆ ಅಂಗಡಿ, ಬೇಕರಿ ಹಾಗೂ ಹೋಟೆಲ್ಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರುವುದು ಸಾಮಾನ್ಯವಾಗಿದೆ.

ದಾಳಿಯ ವೇಳೆ ನಗರ ಸಭೆಯ ಪರಿಸರ ಇಂಜಿನಿಯರ್ ಜಾಫರ್, ಆರೋಗ್ಯ ನಿರೀಕ್ಷರಾದ ಹೀನಾ ಕೌಸರ್, ಭಾರತಿ, ನಾಗರಾಜ್, ಜಯಪ್ರಕಾಶ್, ರುಕ್ಮಿಣಿ, ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ