Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಭವನೀಯ ಕ್ಯಾನ್ಸರ್‌ತಡೆಗೆ ಎಚ್‌ಪಿವಿ ಲಸಿಕೆ ಪೂರಕ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶಿಸ್ತುಬದ್ದ ಜೀವನಶೈಲಿ ಮತ್ತು ನಿರಂತರ ದೈಹಿಕ
, ಮಾನಸಿಕ ಚಟುವಟಿಕೆಗಳು ಆರೋಗ್ಯಯುತ ಬದುಕಿನ ಮಾರ್ಗದರ್ಶಿ ಸೂತ್ರಗಳಾಗಿರುತ್ತವೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮಕ್ಕಳ ಕ್ಯಾನ್ಸರ್‌ವಿಭಾಗದ ಮುಖ್ಯಸ್ಥ ಡಾ.ಅರುಣ್‌ಕುಮಾರ್‌ಹೇಳಿದರು.

ಇಲ್ಲಿನ ಲಯನ್ಸ್‌ಕ್ಲಬ್‌ಆಫ್‌ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಶ್ರೀದೇವರಾಜ ಅರಸ್‌ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಮತ್ತು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಗಳಲ್ಲಿ ಶುಕ್ರವಾರ ಆಯೋಜಿಸಿದ್ದ ಪೀಡಿಯಾಟ್ರಿಕ್ ಕ್ಯಾನ್ಸರ್ (ಮಕ್ಕಳ ಕ್ಯಾನ್ಸರ್) ಜಾಗೃತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ಮಕ್ಕಳಲ್ಲಿ ಅನಿಯಂತ್ರಿತ ಜೀವಕೋಶದ ಬೆಳವಣಿಗೆಯಿಂದ ಉಂಟಾಗುವ ಅಪರೂಪದ ಕಾಯಿಲೆ ಇದಾಗಿದ್ದು, ಲ್ಯುಕೇಮಿಯಾ (ರಕ್ತದ ಕ್ಯಾನ್ಸರ್) ಅತ್ಯಂತ ಸಾಮಾನ್ಯವಾಗಿದೆ. ನಂತರದ ಸ್ಥಾನಗಳಲ್ಲಿ ಲಿಂಫೋಮಾ ಮತ್ತು ಮೆದುಳಿನ ಗೆಡ್ಡೆಗಳಿವೆ. ಇವುಗಳಲ್ಲಿ ಶೇ.90ರಷ್ಟು ಅನುವಂಶಿಕವಲ್ಲ, ಆದರೆ ಆನುವಂಶಿಕ ರೂಪಾಂತರಗಳು ರೋಗಕ್ಕೆ ಕಾರಣವಾಗಬಹುದು. ಸಕಾಲಿಕ ಚಿಕಿತ್ಸೆ, ಕಿಮೋಥೆರಪಿ ಮತ್ತು ಆರೈಕೆಯೊಂದಿಗೆ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ತಿಳಿಸಿದರು.

ಲ್ಯುಕೇಮಿಯಾ ಮಕ್ಕಳಲ್ಲಿ ಕಂಡುಬರುವ ಅತ್ಯಂತ ಸಾಮಾನ್ಯ ರಕ್ತದ ಕ್ಯಾನ್ಸರ್. ಇದು ಅಸ್ಥಿ ಮಜ್ಜೆಯಲ್ಲಿ ಪ್ರಾರಂಭವಾಗಿ, ಬಿಳಿ ರಕ್ತ ಕಣಗಳ ಅಸಹಜ ಬೆಳವಣಿಗೆಗೆ ಕಾರಣವಾಗುತ್ತದೆ. ಲಿಂಫೋಮಾ, ಬ್ರೈನ್ ಟ್ಯೂಮರ್, ನ್ಯೂರೋಬ್ಲಾಸ್ಟೋಮಾ ಮತ್ತು ವಿಲ್ಮ್ಸ್ ಟ್ಯೂಮರ್ ಇತ್ಯಾದಿಗಳು ಚಿಕ್ಕ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ದೀರ್ಘಕಾಲದ ಜ್ವರ, ಆಗಾಗ್ಗೆ ಜ್ವರ ಬರುವುದು, ರಕ್ತಹೀನತೆ, ಸುಸ್ತು, ಬಿಳಿಚಿಕೊಳ್ಳುವುದು, ತೂಕ ಇಳಿಕೆ, ರಕ್ತಸ್ರಾವ, ಊತ ಇತ್ಯಾದಿಗಳನ್ನು ನಿರ್ಲಕ್ಷಿಸದೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.
ಕ್ಯಾನ್ಸರ್‌ಸಾಂಕ್ರಾಮಿಕ ರೋಗವಲ್ಲ. ಜೀವನಶೈಲಿ ಈ ರೋಗದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಕೀಮೋಥೆರಪಿ
, ವಿಕಿರಣ ಚಿಕಿತ್ಸೆ, ಅಸ್ಥಿ ಮಜ್ಜೆ ಕಸಿ ಮುಂತಾದ ಚಿಕಿತ್ಸಾವಿಧಾನಗಳಿವೆ ಎಂದರು.

ಎಚ್‌ಪಿವಿ ಲಸಿಕೆ ಜಾಗೃತಿ:
9 ರಿಂದ 14 ವರ್ಷದ ಮಕ್ಕಳಿಗೆ ಹ್ಯೂಮನ್‌ಪ್ಯಾಪಿಲೋಮಾ ವೈರಸ್‌ಎಚ್‌ಪಿವಿ ಲಸಿಕೆಯನ್ನು ಹಾಕಿಸುವುದು ಅಗತ್ಯ. ಇದು ಸಂಭವನೀಯ ಕ್ಯಾನ್ಸರ್‌ಅನ್ನು ತಡೆಗಟ್ಟಬಹುದು. ಇದೀಗ ಭಾರತ ಸರ್ಕಾರವು ಈ ಲಸಿಕೆಯನ್ನು ಸಾರ್ವತ್ರೀಕರಣಗೊಳಿಸುವ ಅಭಿಯಾನ ಆರಂಭಿಸುತ್ತಿದ್ದು
, ಮುಂದಿನ ದಿನಗಳಲ್ಲಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಲಸಿಕೆ ದೊರೆಯುವ ಸಾದ್ಯತೆ ಇದೆ ಎಂದು ತಿಳಿಸಿದರು.

ಲಯನ್ಸ್ ಕ್ಲಬ್‌ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್‌ಮಲ್ಟಿಪಲ್‌ರ ಮಾಜಿ ಅಧ್ಯಕ್ಷ ಬಿ.ಎಸ್.ರಾಜಶೇಖರಯ್ಯ, ಉಪಾಧ್ಯಕ್ಷ ಸಿ.ಎಂ.ನಾರಾಯಣಸ್ವಾಮಿ, 317ಎಫ್‌ನ ಮಕ್ಕಳ ಕ್ಯಾನ್ಸರ್‌ವಿಭಾಗದ ಜಿಲ್ಲಾ ಸಂಯೋಜಕರಾದ ಡಾ.ಸಿ.ವಿ.ಗೀತಾ, ಮಾನಸಿಕ ಆರೋಗ್ಯ ಜಿಲ್ಲಾ ಸಂಯೋಜಕರಾದ ಜಿ.ಅನುಪಮ, ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಪ್ರಾಂತೀಯ ಅಧ್ಯಕ್ಷ ಎಲ್.ಎನ್.ಪ್ರದೀಪ್‌ಕುಮಾರ್, ವಲಯ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯಕಾರ್ತಿಕ್‌, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಎಸ್‌ಡಿಯುಐಎಂ ಪ್ರಾಂಶುಪಾಲ ಡಾ.ಗೌರಪ್ಪ, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್‌ಕಾರ್ಯದರ್ಶಿ ಎ.ಎಸ್.ಸುಮ, ಖಜಾಂಚಿ ಕೆ.ಸಿ.ನಾಗರಾಜ್‌, ಕೆ.ವಿ.ಪ್ರಸನ್ನಕುಮಾರ್, ಲಕ್ಷ್ಮೀಶ್ರೀನಿವಾಸ್, ಅರುಂಧತಿ ಮತ್ತಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ