LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾಂತ್ರಿಕ ಬದುಕಿನಲ್ಲಿ ಹಣದ ಹಿಂದೆ ಓಡುತ್ತಿರುವ ಮಾನವರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಯಾಂತ್ರಿಕ ಬದುಕಿನಲ್ಲಿ ಹಣದ ಹಿಂದೆ ಓಡುತ್ತಿರುವವರು ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳಬೇಕಾದರೆ ಕಲೆ
, ಸಾಹಿತ್ಯ, ಸಂಗೀತದ ಕಡೆ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಕರೆ ನೀಡಿದರು.

ಅಂಜನಾ ನೃತ್ಯ ಕಲಾ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನ ಕೋಗಿಲೆ ಎಸ್.ಜಾನಕಿಯವರಿಗೆ ಭಾನುವಾರ ಆಯೋಜಿಸಲಾಗಿದ್ದ ನೃತ್ಯ ನಾದ ನಮನ ನೃತ್ಯ ನಿವೇದನ ಹಾಗೂ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನೃತ್ಯ ಕಲೆ, ಸಾಹಿತ್ಯ, ಸಂಗೀತ, ಭರತನಾಟ್ಯಕ್ಕೆ ಮನ ಸೋಲದವರಿಲ್ಲ. ಮಗು ಹುಟ್ಟಿ ಬೆಳೆಯುವ ಹಂತದಲ್ಲಿ ತಾಯಿಯ ಜೋಗುಳದ ಹಾಡಿಗೆ ಸುಖ ನಿದ್ರೆಗೆ ಜಾರುತ್ತದೆ. ಭಾರತೀಯ ಪರಂಪರೆಯಲ್ಲಿ ಕಲೆಗೆ ವೈಶಿಷ್ಠ್ಯತೆಯಿದೆ. ನೃತ್ಯವನ್ನು ನಿರಂತರವಾಗಿ ಅಭ್ಯಾಸ ಮಾಡುವುದರಿಂದ ದೇಹದ ಆರೋಗ್ಯ, ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದವರು ಸಾವಿರಾರು ವಿದ್ಯಾರ್ಥಿಗಳಿಗೆ ಭರತ ನಾಟ್ಯ ಕಲಿಸಿ ದೇಶ ವಿದೇಶಗಳಲ್ಲಿ ಕೀರ್ತಿ ಗಳಿಸಿದ್ದಾರೆ. ಹಣ ಗಳಿಸಿ ಸಂತೋಷ ಪಡುವುದಕ್ಕಿಂತಲೂ ಬಹುತೇಕರು ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆಗೆ ಹಣ ಖರ್ಚು ಮಾಡುತ್ತಿದ್ದಾರೆ. ಬದುಕು ಸಮತೋಲನವಾಗಿರಬೇಕಾದರೆ ಇಂತಹ ಕಲೆಗಳನ್ನು ಆಸ್ವಾದಿಸಬೇಕೆಂದು ಹೇಳಿದರು.

ಸಾಧನೆ ಯಾರ ಮನೆಯ ಸ್ವತ್ತಲ್ಲ. ಜೀವನದಲ್ಲಿ ಪರಿಶ್ರಮ ಪಡುವವರು ದೊಡ್ಡ ಸಾಧನೆ ಮಾಡಬಹುದು. ಎಸ್.ಜಾನಕಿಗೆ ಬಾಲ್ಯದಲ್ಲಿಯೇ ಹಾಡುವ ಹವ್ಯಾಸವಿದ್ದುದರಿಂದ ದಕ್ಷಿಣ ಭಾರತದಲ್ಲಿಯೇ ಕಂಚಿನ ಕಂಠದ ಗಾಯಕಿ ಎಂದು ಪ್ರಸಿದ್ದಿಯಾಗಿದ್ದರು. ಅದೆ ರೀತಿ ಲತಾ ಮಂಗೇಶ್ಕರ್ ಕೂಡ ಜನರ ಮನಸ್ಸಿನಲ್ಲಿ ಇನ್ನು ಅಚ್ಚಳಿಯದೆ ಉಳಿದಿದ್ದಾರೆಂದರು.

ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತ ಚಿತ್ರದುರ್ಗದಲ್ಲಿ ಅಂಜನಾ ನೃತ್ಯ ಕಲಾ ಕೇಂದ್ರ ಸ್ಥಾಪನೆಯಾಗದಿದ್ದರೆ ಕಲೆಗಳೆ ಇರುತ್ತಿರಲಿಲ್ಲ. ಚಿಕ್ಕವರಿಂದ ಹಿಡಿದು ದೊಡ್ಡವರತನಕ ಎಲ್ಲರೂ ಮೊಬೈಲ್‌ನಲ್ಲಿ ಮುಳುಗಿ ಹೋಗಿರುವುದರಿಂದ ಹಾಡು ಸಂಗೀತದ ಬಗ್ಗೆ ಒಲವು ಕಡಿಮೆಯಾಗಿದೆ.ನಂದಿನಿ ಶಿವಪ್ರಕಾಶ್‌ರವರು ಭರತನಾಟ್ಯದ ಮೂಲಕ ದೇಶ-ವಿದೇಶಗಳಲ್ಲಿ ಚಿತ್ರದುರ್ಗದ ಕೀರ್ತಿಯನ್ನು ಮೊಳಗಿಸಿದ್ದಾರೆ. ಶಿಷ್ಯರು ಗುರುವಂದನೆ ಮಾಡುವುದು ಅಪರೂಪವಾಗಿರುವ ಇಂದಿನ ಕಾಲದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಸಿ.ಆರ್.ಶಿವಪ್ರಕಾಶ್‌ರವರಿಗೆ ಗುರುವಂದನೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ. ಗುರುಗಳ ಕೃಪೆಯಿದ್ದರೆ ಏನನ್ನಾದರೂ ಸಾಧಿಸಬಹುದು. ೪೨ ವರ್ಷಗಳಲ್ಲಿ ಸಾವಿರಾರು ಭರತನಾಟ್ಯ ವಿದ್ಯಾರ್ಥಿಗಳನ್ನು ಅಂಜನಾ ನೃತ್ಯ ಕಲಾ ಕೇಂದ್ರ ಕೊಡುಗೆಯಾಗಿ ನೀಡಿರುವುದು ಕಮ್ಮಿ ಸಾಧನೆಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಜನಾ ನೃತ್ಯ ಕಲಾ ಕೇಂದ್ರದ ಸಿ.ಆರ್.ಶಿವಪ್ರಕಾಶ್, ವಿದುಷಿ ಡಾ.ನಂದಿನಿ ಶಿವಪ್ರಕಾಶ್ ಇವರುಗಳು ವೇದಿಕೆಯಲ್ಲಿದ್ದರು.

ಶ್ರೀಕೃಷ್ಣದೇವರಾಯ, ಗುರು-ಶಿಷ್ಯರು, ಶೃತಿ ಸೇರಿದಾಗ ಚಿತ್ರದಲ್ಲಿ ಎಸ್.ಜಾನಕಿರವರು ಹಾಡಿರುವ ಕನ್ನಡ ಗೀತೆಗಳಿಗೆ ಅಂಜನಾ ನೃತ್ಯ ಕಲಾ ಕೇಂದ್ರದವರು ಭರತ ನಾಟ್ಯದ ಮೂಲಕ ನೃತ್ಯ ನಿವೇದನ ಸಮರ್ಪಿಸಿದರು.

ವಿದುಷಿ ಡಾ.ರಕ್ಷಿತಾ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ ವೈವಿದ್ಯ, ವಿದುಷಿ ಪ್ರಜ್ಞಾ ಮತ್ತು ತಂಡದಿಂದ ನೃತ್ಯ ಮಾಲಿಕಾ, ವಿದುಷಿ ವೈಷ್ಣವಿ ಮರಡಿ ಮತ್ತು ತಂಡದಿಂದ ವಿಶೇಷ ಆಕರ್ಷಣೆ ನಟವರ ನೃತ್ಯ ರೂಪಕ ನೆರದಿದ್ದವರ ಮನ ಸೂರೆಗಳಿಸಿತ್ತು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್ಬಿಡದಿ ಟೌನ್‌ಶಿಪ್ ರದ್ದತಿಗೆ ಆಗ್ರಹಿಸಿ ಹೋರಾಟ: ರೈತರ 2ನೇ ದಿನದ ಪಾದಯಾತ್ರೆಗೆ ದೇವೇಗೌಡರು ಭಾಗಿಹಾರುವ ಕಾರಿನ ಯಶಸ್ವಿ ಪರೀಕ್ಷೆ: ಭಾರತದ ಭವಿಷ್ಯದ ಸಂಚಾರ ವ್ಯವಸ್ಥೆಗೆ ಹೊಸ ಮೆರುಗು