Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಜಯಂತಿ ವೇಳೆ ಹೈಡ್ರಾಮಾ: ಶಾಸಕ ಪ್ರದೀಪ್ ಈಶ್ವರ್‌ಗೆ ಮುತ್ತಿಗೆ, ಚಪ್ಪಲಿ ಎಸೆತ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ತೀವ್ರ ರಾಜಕೀಯ ಸಂಘರ್ಷ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ. ಕೆ. ಸುಧಾಕರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರ ನಡುವೆ ನಡೆದ ಮಾತಿನ ಚಕಮಕಿ, ಜಯಂತಿ ಆಚರಣೆಯ ವೇದಿಕೆಯನ್ನು ರಣರಂಗವಾಗಿಸಿತು.

ವೇದಿಕೆಯಲ್ಲಿ ಗಲಾಟೆ: ಶಾಸಕರ ಭಾಷಣಕ್ಕೆ ತಡೆ
ಕಾರ್ಯಕ್ರಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಆಗಮಿಸಿ ಭಾಷಣ ಆರಂಭಿಸುತ್ತಿದ್ದಂತೆಯೇ ಜೆಡಿಎಸ್ ಮತ್ತು ಒಕ್ಕಲಿಗ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 

"ಶಾಸಕ ಪ್ರದೀಪ್ ಈಶ್ವರ್ ಅವರು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ನೀಡಿದ ಹೇಳಿಕೆಗೆ ತಕ್ಷಣ ಕ್ಷಮೆ ಕೇಳಬೇಕು ಮತ್ತು ಕಾರ್ಯಕ್ರಮದಿಂದ ಹೊರಗೆ ಹೋಗಬೇಕು" ಎಂದು ಘೋಷಣೆ ಕೂಗಲಾರಂಭಿಸಿದರು.

ಇದೇ ವೇಳೆ ಸಂಸದ ಡಾ. ಕೆ. ಸುಧಾಕರ್ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಹೊರಗೆ ಕಳುಹಿಸುವಂತೆ ಸುಧಾಕರ್ ಹಾಗೂ ಕುಮಾರಸ್ವಾಮಿ ಬೆಂಬಲಿಗರು ಪಟ್ಟು ಹಿಡಿದರು.

ಹೊರಬರುತ್ತಿದ್ದಂತೆ ಹೈಡ್ರಾಮಾ: ಚಪ್ಪಲಿ ಎಸೆತ!
ಗದ್ದಲದ ನಡುವೆಯೇ ಕಾರ್ಯಕ್ರಮದಿಂದ ಹೊರಗೆ ಬಂದ ಶಾಸಕ ಪ್ರದೀಪ್ ಈಶ್ವರ್, ತಮ್ಮ ಎಂದಿನ ಶೈಲಿಯಲ್ಲಿ ಮೀಸೆ ತಿರುವುತ್ತಾ, ಎದೆ ತಟ್ಟಿಕೊಳ್ಳುತ್ತಾ ಹಾವಭಾವ ಪ್ರದರ್ಶಿಸಿದರು. "ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ" ಎಂಬಂತೆ ಸವಾಲು ಹಾಕುತ್ತಿದ್ದಾಗ, ನೆರೆದಿದ್ದ ಜನಸಂದಣಿಯಿಂದ ವ್ಯಕ್ತಿಯೊಬ್ಬರು ಶಾಸಕರನ್ನು ಗುರಿಯಾಗಿಸಿ ಚಪ್ಪಲಿ ಎಸೆದಿದ್ದಾರೆ. ಆದರೆ, ಆ ಚಪ್ಪಲಿ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಬಿದ್ದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಚಪ್ಪಲಿ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

"ಒಬಿಸಿ ಶಾಸಕನಿಗೆ ಅವಮಾನ":ಪ್ರದೀಪ್ ಈಶ್ವರ್ ಆಕ್ರೋಶ
ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಹಿಂದುಳಿದ ವರ್ಗದ ಅಸ್ತ್ರ: "ನಾನು ಈ ಜಿಲ್ಲೆಯ ಏಕೈಕ ಶೋಷಿತ ಒಬಿಸಿ ಶಾಸಕ. ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಕರೆದು, ಈಗ ಕುಮಾರಣ್ಣನ ಬೆಂಬಲಿಗರು ನನಗೆ ಅವಮಾನ ಮಾಡಿದ್ದಾರೆ. ಈ ಜಿಲ್ಲೆಯಲ್ಲಿ ಒಬಿಸಿ ಶೋಷಿತರು ಬದುಕಬಾರದಾ ಕುಮಾರಣ್ಣ?" ಎಂದು ಪ್ರಶ್ನಿಸಿದರು.

ನಾಯಕರ ಸಹಿಸಲ್ಲ: "ಕುಮಾರಣ್ಣನಿಗೆ ಡಿ.ಕೆ. ಶಿವಕುಮಾರ್ ಆಗಲ್ಲ, ಚಲುವರಾಯಸ್ವಾಮಿ ಸಹಿಸಲ್ಲ, ಈಗ ಒಬ್ಬ ಒಬಿಸಿ ಶಾಸಕ ಬೆಳೆಯುವುದನ್ನೂ ಸಹಿಸುತ್ತಿಲ್ಲ" ಎಂದು ದೂರಿದರು.

ತಾಕತ್ತಿದ್ದರೆ ಚಿಕ್ಕಬಳ್ಳಾಪುರಕ್ಕೆ ಬಾ:ಕುಮಾರಸ್ವಾಮಿಗೆ ಸವಾಲು!
ತಮ್ಮ ಆಕ್ರೋಶವನ್ನು ಮುಂದುವರಿಸಿದ ಪ್ರದೀಪ್ ಈಶ್ವರ್, ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೇರ ಚುನಾವಣಾ ಸವಾಲು ಹಾಕಿದರು.

"ಕುಮಾರಣ್ಣ, ನಾನು ನಿನ್ನ ಚೇಲಾಗಳಿಗೆ ಹೆದರುವುದಿಲ್ಲ. ನಿನಗೆ ತಾಕತ್ತಿದ್ದರೆ ನೇರವಾಗಿ ಬಂದು ಚಿಕ್ಕಬಳ್ಳಾಪುರದಲ್ಲಿ ನನ್ನ ವಿರುದ್ಧ ಚುನಾವಣೆಗೆ ನಿಲ್ಲು. ನೀನಾ... ನಾನಾ... ಒಂದು ಕೈ ನೋಡಿಯೇ ಬಿಡೋಣ" ಎಂದು ತೊಡೆ ತಟ್ಟಿದರು.

ಸದ್ಯ ಚಿಕ್ಕಬಳ್ಳಾಪುರದಲ್ಲಿ ರಾಜಕೀಯ ವಾತಾವರಣ ಸಂಪೂರ್ಣ ಕಾವೇರಿದ್ದು, ಜಯಂತಿಯ ನೆಪದಲ್ಲಿ ಭುಗಿಲೆದ್ದ ಈ ರಾಜಕೀಯ ಕಿಡಿ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!