Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇವಲ ಎಸ್ಸಿ ಎಂದು ಬರೆಸಿದರೆ ಯಾವುದೇ ಸೌಲಭ್ಯವಿಲ್ಲ ಮಾದಿಗ ಎಂದೇ ಬರೆಸಿ-ಆಂಜನೇಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುವತ್ತು ವರ್ಷದ ಹೋರಾಟ ಫಲ ಒಳಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು
, ಈಗ ನಮ್ಮ ಮುಂದಿರುವ ಸವಾಲು ಜಾತಿ ಸಮೀಕ್ಷೆ ಶೇ.100ರಷ್ಟು ಯಶಸ್ವಿಗೊಳಿಸುವುದಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದರು.

ಬೆಂಗಳೂರಿನ ಲಿಡ್ಕರ್ ಭವನದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ  ಶನಿವಾರ ಹಮ್ಮಿಕೊಂಡಿದ್ದ ಮಾದಿಗ ಮುಖಂಡರ ಜಾಗೃತಿ ಕಾರ್ಯಕ್ರಮದಲ್ಲಿ ಜಾತಿಸಮೀಕ್ಷೆ ವೇಳೆ ಬರೆಯಿಸಿ ನಮ್ಮ ಜಾತಿ ಮಾದಿಗ ಎಂಬ ಭಿತ್ತಿಪತ್ರ, ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದಲ್ಲಿನ ಕೆಲವರು ನಮ್ಮ ಜನಸಂಖ್ಯೆ ಹೆಚ್ಚು ಇದೆ ಎನ್ನುತ್ತಿದ್ದಾರೆ. ಆದರೆ, ವಾಸ್ತವವಾಗಿ ಮಾದಿಗರ ಸಂಖ್ಯೆ ಹೆಚ್ಚಿದೆ. ಆದರೆ, ನಮ್ಮಲ್ಲಿ ಜಾಗೃತಿ ಕೊರತೆ ಕಾರಣಕ್ಕೆ ಹಿಂದುಳಿದಿದ್ದೇವೆ. ಈಗ ಜಾತಿಸಮೀಕ್ಷೆ ಬಳಿಕ ಎಲ್ಲ ಸತ್ಯ ಹೊರಬೀಳಲಿದೆ. ಅವರವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಆಗಲಿದೆ ಎಂದು ಹೇಳಿದರು.

ಆದ್ದರಿಂದ ಮಾದಿಗ ಸಮುದಾಯವರು ಪ್ರತಿ ಊರು, ಪಟ್ಟಣ, ಕಾಲೋನಿ, ಕೇರಿ, ಓಣಿ, ಬಡಾವಣೆಗಳಲ್ಲಿನ ಮಾದಿಗ ಸಮುದಾಯದ ಪ್ರತಿ ಮನೆಗೆ ಭೇಟಿ ನೀಡಿ ಮೇ 5ರಿಂದ 17ರ ವರೆಗೆ ಮನೆಗಳಲ್ಲಿಯೇ ಇದ್ದು, ಜಾತಿ ಸಮೀಕ್ಷೆದಾರರು ಮನೆಗೆ ಬಂದಾಗ ನಾವು ಕೋಡ್ 61 ಮಾದಿಗ ಎಂದು ಹೇಳಬೇಕು. ಈ ಮೂಲಕ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚು ಮೀಸಲಾತಿ ಪಡೆಯುವ ಪ್ರಯತ್ನ ಮಾಡಬೇಕಿದೆ ಎಂದರು.

ಮುವತ್ತು ವರ್ಷ ಹೋರಾಟ ಮಾಡಿದ ಸಂಘಟನೆಗಳ ನಾಯಕರು, ಮುಖಂಡರು, ಚಿಂತಕರು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಪರೋಕ್ಷವಾಗಿ ಬೆಂಬಲಕ್ಕೆ ನಿಂತ ನೌಕರ ವರ್ಗ ಮೇ 5ರಿಂದ ಮೇ 23ರ ವರೆಗೆ ವಿಶ್ರಾಂತಿ ರಹಿತವಾಗಿ ಚಟುವಟಿಕೆಯಲ್ಲಿರಬೇಕು. ಮಾದಿಗ ಸಮುದಾಯದ ಯಾವುದೇ ಒಂದು ಕುಟುಂಬ, ಒಬ್ಬ ಸದಸ್ಯನೂ ಜಾತಿಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕಾಗಿದೆ. ಈ ಮೂಲಕ ಮೀಸಲಾತಿ ಪಡೆಯುವಲ್ಲಿ ವಂಚಿತರಾಗಿರುವ ಮಾದಿಗ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ ಎಂದು ಭಾಷಣ, ಮಾತುಗಳಲ್ಲಿ ಹೇಳುತ್ತಿದ್ದೀರಿ. ಅದನ್ನು ದಾಖಲೆ ರೂಪದಲ್ಲಿ ತೋರಿಸಲು ಮಾದಿಗ ಸಮುದಾಯದ ಸಂಘಟನೆ, ಮುಖಂಡರುಗಳು ಪ್ರತಿ ಬಡಾವಣೆ, ಮನೆಗಳಿಗೆ ಭೇಟಿ ನೀಡಿ ನಮ್ಮ ಜಾತಿ ಮಾದಿಗ ಎಂದು ಹೆಮ್ಮೆಯಿಂದ ಹೇಳುವಂತೆ ಜಾಗೃತಿ ಮೂಡಿಸಬೇಕು ಎಂದರು.

ಸವಲತ್ತು ಬೇಕಾದರೆ ಕಡ್ಡಾಯವಾಗಿ ಮಾದಿಗ ಜಾತಿ ಎಂದು ಹೆಮ್ಮೆಯಿಂದ ಹೇಳಿ, ಇಲ್ಲದಿದ್ದರೆ ಮೀಸಲಾತಿಯಿಂದ ವಂಚಿತರಾಗುತ್ತೀರಿ ಎಂಬ ಎಚ್ಚರ ಇರಬೇಕು ಎಂದು ಎಚ್ಚರಿಸಿದರು.

ಬೆಂಗಳೂರು ಸೇರಿ ರಾಜ್ಯದ ಪ್ರತಿ ಊರು, ಪಟ್ಟಣ, ನಗರದಲ್ಲಿನ ಎಲ್ಲ ಜಾತಿ, ಧರ್ಮದವರ ಮನೆಗಳಿಗೆ ಸಮೀಕ್ಷೆದಾರರು ಭೇಟಿ ನೀಡುತ್ತಾರೆ. ಈ ವೇಳೆ ಎಲ್ಲೇಲ್ಲಿ ಮಾದಿಗರ ಮನೆಗಳು ಇವೆಯೆಂಬುದನ್ನು ಗುರುತಿಸಿ, ಅವರ ಮನೆಗೆ ಸಮೀಕ್ಷೆದಾರರು ಬಂದಾಗ ನೀವುಗಳು ಖುದ್ದಾಗಿ ಇದ್ದು ಮಾದಿಗ ಎಂದು ಹೇಳಿಸಬೇಕು. ಈ ಮೂಲಕ ಮೀಸಲಾತಿಯಲ್ಲಿ ಹೆಚ್ಚು ಪ್ರಮಾಣ ನಮ್ಮದಾಗಿಸಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ. ನೊಂದ, ಅಸ್ಪೃಶ್ಯ ಜನರನ್ನು ಮುಖ್ಯವಾಹಿನಿಗೆ ತರಲು ಪಣ ತೊಟ್ಟಿದ್ದಾರೆ. ಅವರು ಒಳಮೀಸಲಾತಿ ಜಾರಿಗೊಳಿಸಲು ಹೆಚ್ಚು ಆಸಕ್ತರಾಗಿದ್ದು, ಅವರ ಕಾರ್ಯಕ್ಕೆ ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದು ತಿಳಿಸಿದರು.

ಐಎಎಸ್ ನಿವೃತ್ತ ಅಧಿಕಾರಿ ಬಿ.ಎಚ್.ಅನಿಲ್‌ಕುಮಾರ್, ನಿವೃತ್ತ ಐಆರ್‌ಎಸ್ ಅಧಿಕಾರಿ ಭೀಮಾಶಂಕರ್, ಆದಿಜಾಂಬವ ಸಂಘದ ಅಧ್ಯಕ್ಷ ಭೀಮರಾಜ್, ಮಾದಿಗ ದಂಡೋರದ ಮುಖಂಡ ಶ್ರೀನಿವಾಸ್, ಅಹಿಂದ ನಾಯಕ ಮುತ್ತುರಾಜ್, ಮುಖಂಡರಾದ ಸುಬ್ಬರಾಯುಡು, ನಾರಾಯಣ ಇತರರು ಮಾತನಾಡಿದರು.

“18 ದಿನಗಳೇ ಮಹತ್ವ ಮೇ 5ರಿಂದ ಮೇ 23ರ ವರೆಗೆ ಒಟ್ಟು 18 ದಿನಗಳ ಕಾಲ ನಡೆಯಲಿರುವ ಜಾತಿಸಮೀಕ್ಷೆ ಕಾರ್ಯ, 30 ವರ್ಷದ ಕಾಲ ನಡೆಸಿದ ಹೋರಾಟಕ್ಕಿಂತಲೂ ಹೆಚ್ಚು ಮಹತ್ವದ್ದಾಗಿದೆ. ಆದ್ದರಿಂದ ಈ ಸಮಯದಲ್ಲಿ ನಾವು ಹೆಚ್ಚು ಎಚ್ಚರ ವಹಿಸಬೇಕು. ಮಾದಿಗ ಸಮುದಾಯದ ಪ್ರತಿ ಮನೆಗೆ ಭೇಟಿ ನೀಡಿ ಸಮೀಕ್ಷೆದಾರರು ಬಂದಾಗ ನಮ್ಮ ಜಾತಿ ಮಾದಿಗ ಎಂದು ಬರೆಯಿಸುವಂತೆ ಜಾಗೃತಿಗೊಳಿಸಬೇಕು”. ಆಂಜನೇಯ .
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ