LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖಾಲಿ ಇರುವ 56,432 ಹುದ್ದೆಗಳ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಮತ್ತು ಕೆಪಿಎಸ್‌ಸಿ ಸೇರಿದಂತೆ ನೇಮಕಾತಿ ಸಂಸ್ಥೆಗಳಲ್ಲಿ ಪಾರದರ್ಶಕತೆ ತರಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಸಂಘಟನೆಯು ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಂಡಿದೆ. ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು, ರಾಜ್ಯ ಸರ್ಕಾರಕ್ಕೆ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳ ಆಕ್ರೋಶ:
ಕಳೆದ ಡಿಸೆಂಬರ್‌ನ ಚಳಿಗಾಲದ ಅಧಿವೇಶನದಲ್ಲಿ ಉದ್ಯೋಗಾಕಾಂಕ್ಷಿಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರ 56,432 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿತ್ತು. ಆದರೆ ಅನುಮೋದನೆ ದೊರೆತು ಆರು ತಿಂಗಳು ಕಳೆದರೂ ಕೇವಲ ಕೆಲವೇ ಹುದ್ದೆಗಳಿಗೆ ಮಾತ್ರ ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರದ ಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡುತ್ತಾ ನೇಮಕಾತಿಯನ್ನು ಮುಂದೂಡುತ್ತಿರುವುದು ಯುವಜನರಲ್ಲಿ ಭ್ರಮನಿರಸನ ಉಂಟುಮಾಡಿದೆ.

ಸರ್ಕಾರ ನೀಡಿರುವ 5 ವರ್ಷಗಳ ವಯೋಮಿತಿ ಸಡಿಲಿಕೆಯ ಅವಧಿ ಮುಗಿಯುತ್ತಾ ಬಂದರೂ ನೇಮಕಾತಿ ನಡೆಯದ ಕಾರಣ ಉದ್ಯೋಗಾಕಾಂಕ್ಷಿಗಳು ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದರೆ ಯುವಜನರು ಮತ್ತೆ ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದು ಸಂಘಟನೆ ಎಚ್ಚರಿಸಿದೆ.

ದುಪ್ಪಟ್ಟಾದ ಪೊಲೀಸ್ ನೇಮಕಾತಿ ಶುಲ್ಕಕ್ಕೆ ವಿರೋಧ:
ಇತ್ತೀಚೆಗೆ ಹೊರಡಿಸಲಾದ ಪೊಲೀಸ್ ನೇಮಕಾತಿ ಅಧಿಸೂಚನೆಯಲ್ಲಿ ಪರೀಕ್ಷಾ ಶುಲ್ಕವನ್ನು ಈ ಹಿಂದಿನ ರೂ. 400 ರಿಂದ ಏಕಾಏಕಿ ರೂ. 750 ಕ್ಕೆ ಏರಿಸಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ರಾಜ್ಯದ ಇತರ ಜಿಲ್ಲೆಗಳೆರಡಕ್ಕೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೇವಲ ಅರ್ಜಿ ಶುಲ್ಕವೇ ರೂ. 1500 ಆಗುತ್ತದೆ. ಈಗಾಗಲೇ ನಿರುದ್ಯೋಗದಿಂದ ಕಂಗಾಲಾಗಿರುವ ಯುವಕರಿಂದ ಈ ರೀತಿ ಹಣ ವಸೂಲಿ ಮಾಡುವುದು ಸರಿಯಲ್ಲ, ಹೀಗಾಗಿ ಅರ್ಜಿ ಶುಲ್ಕವನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಸದ್ಯ ಪೊಲೀಸ್ ನೇಮಕಾತಿ ಅರ್ಜಿ ಸಲ್ಲಿಕೆಯಲ್ಲಿ ಎದುರಾಗುತ್ತಿರುವ ಸರ್ವರ್ ಹಾಗೂ ತಾಂತ್ರಿಕ ದೋಷಗಳನ್ನು ನಿವಾರಿಸಿ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಪಿಎಸ್‌ಸಿ ಸ್ವಚ್ಛಗೊಳಿಸಲು 'ಹೋಟಾ ಸಮಿತಿ' ವರದಿ ಜಾರಿಗೆ ಆಗ್ರಹ:
ಇತ್ತೀಚೆಗೆ ನಡೆದ ಕೆಎಎಸ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ವರದಿಗಳು ಕೇಳಿಬಂದಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಎಐಡಿವೈಒ ಒತ್ತಾಯಿಸಿದೆ. ಕೆಪಿಎಸ್‌ಸಿ ಮತ್ತು ಕೆಇಎ ನಡೆಸುವ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೆಪಿಎಸ್‌ಸಿಯನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಪಿ.ಸಿ. ಹೋಟಾ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.

ಎಐಡಿವೈಒ ಸಂಘಟನೆಯ ಪ್ರಮುಖ ಹಕ್ಕೊತ್ತಾಯಗಳು:
ಹುದ್ದೆಗಳ ಭರ್ತಿ: ಅನುಮೋದನೆ ನೀಡಿರುವ 56,432 ಹುದ್ದೆಗಳಿಗೆ ತಕ್ಷಣ ಅಧಿಸೂಚನೆ ಹೊರಡಿಸಿ, ನೇಮಕಾತಿ ಪ್ರಕ್ರಿಯೆಯ ಅಧಿಕೃತ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು.

ಭ್ರಷ್ಟಾಚಾರಕ್ಕೆ ತಡೆ: ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ, ಪಾರದರ್ಶಕತೆ ತರಲು ಕೆಪಿಎಸ್‌ಸಿಯಲ್ಲಿ ಪಿ.ಸಿ. ಹೋಟಾ ಸಮಿತಿ ವರದಿಯನ್ನು ಜಾರಿಗೊಳಿಸಬೇಕು.

ಶುಲ್ಕ ವಿನಾಯಿತಿ ಮತ್ತು ಉಚಿತ ಸಾರಿಗೆ: ಪೊಲೀಸ್ ನೇಮಕಾತಿ ಸೇರಿದಂತೆ ಎಲ್ಲಾ ಪರೀಕ್ಷೆಗಳ ದುಬಾರಿ ಅರ್ಜಿ ಶುಲ್ಕವನ್ನು ರದ್ದುಗೊಳಿಸಬೇಕು ಮತ್ತು ಅಭ್ಯರ್ಥಿಗಳಿಗೆ ಪರೀಕ್ಷೆಯ ದಿನದಂದು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.

ತಾಂತ್ರಿಕ ಸಮಸ್ಯೆ ನಿವಾರಣೆ: ಪ್ರಸ್ತುತ ಪೊಲೀಸ್ ನೇಮಕಾತಿ ಅರ್ಜಿ ಸಲ್ಲಿಕೆಯಲ್ಲಿರುವ ಸರ್ವರ್ ಸಮಸ್ಯೆಯನ್ನು ಬಗೆಹರಿಸಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ