LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಬಿಎಲ್‌ಎಗಳ ಮಹತ್ವದ ಸಭೆ: ನಿಖಿಲ್ ಭಾಗಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಬೆಂಗಳೂರು:
ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಪಕ್ಷದ ಬಿಎಲ್‌ಎ-1 ಹಾಗೂ ಪ್ರಮುಖ ಮುಖಂಡರ "ಬಿಎಲ್‌ಎಗಳ ಜವಾಬ್ದಾರಿ ವಿಶೇಷ ಸಭೆ" ಜರುಗಿತು.

​ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ, ಮುಂಬರುವ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಬಿಎಲ್‌ಎಗಳ ಕರ್ತವ್ಯಗಳ ಕುರಿತು ಸಮಾಲೋಚನೆ ನಡೆಸಿದರು.

​ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಮುಖ ವೇಳಾಪಟ್ಟಿ:
​ಸಭೆಯಲ್ಲಿ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆಯ ಹಂತಗಳನ್ನು ಪಕ್ಷದ ಪದಾಧಿಕಾರಿಗಳಿಗೆ ವಿವರಿಸಲಾಗಿದ್ದು
, ಅದರ ವಿವರಗಳು ಹೀಗಿವೆ.

​ಜೂನ್ 20 ರಿಂದ 29: ಚುನಾವಣಾ ಅಧಿಕಾರಿಗಳು ನಡೆಸುವ ತರಬೇತಿ ಕಾರ್ಯಾಗಾರಗಳು ಮತ್ತು ಸಭೆಗಳಲ್ಲಿ ಬಿಎಲ್‌ಎಗಳು ಕಡ್ಡಾಯವಾಗಿ ಭಾಗವಹಿಸುವುದು.

​ಜೂನ್ 30 ರಿಂದ ಜುಲೈ 29: ಮನೆ-ಮನೆ ಗಣತಿ ಪ್ರಕ್ರಿಯೆ.
​ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ.
​ಆಗಸ್ಟ್ 5 ರಿಂದ ಸೆಪ್ಟೆಂಬರ್ 4: ಹೊಸದಾಗಿ ಹೆಸರು ಸೇರ್ಪಡೆ
, ತಿದ್ದುಪಡಿ ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ.
​ಆಗಸ್ಟ್ 5 ರಿಂದ ಅಕ್ಟೋಬರ್ 3: ಸಲ್ಲಿಕೆಯಾದ ಆಕ್ಷೇಪಣೆಗಳ ವಿಚಾರಣೆ ಮತ್ತು ವಿಲೇವಾರಿ.
​ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಬಿಡುಗಡೆ.

​ಅಧಿಕಾರಿಗಳೊಂದಿಗೆ ಸಹಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಕರೆ:
​"ಚುನಾವಣಾ ಅಧಿಕಾರಿಗಳು ನೀಡುವ ನಿರ್ದೇಶನಗಳನ್ನು ಬಿಎಲ್‌ಎಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿಯೊಂದು ಹಂತದಲ್ಲೂ ಅಧಿಕಾರಿಗಳಿಗೆ ಪೂರ್ಣ ಸಹಕಾರ ನೀಡುವ ಮೂಲಕ ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಬಿಎಲ್‌ಎಗಳ ಜವಾಬ್ದಾರಿಯಾಗಿದೆ" ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.

​ಈ ವಿಶೇಷ ಸಭೆಯಲ್ಲಿ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪಕ್ಷದ ಬಿಎಲ್‌ಎಗಳು ಉಪಸ್ಥಿತರಿದ್ದರು.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬ ಕಲಹ ಪ್ರಕರಣ ಅಧ್ಯಯನ: ಪುರುಷರಿಗೂ ಕಾನೂನು ರಕ್ಷಣೆ ಅಗತ್ಯ:ಆನಂದ್ ಸಿ ತಿರುಮಲಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ-ಡಾ. ತಾರಿಣಿ ಶುಭದಾಯಿನಿಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆಕೃತಕ ಬುದ್ಧಿಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆವಿಜೃಂಭಣೆಯಿಂದ ನಡೆದ ಸಂಭ್ರಮದ ಭೂತ ನೆರಿಗೆಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್ಆನೇಕಲ್ ಬಳಿ ಭೀಕರ ಅಗ್ನಿ ಅವಘಡ: ಧಗಧಗನೆ ಉರಿದು ಭಸ್ಮವಾದ 4 ಖಾಸಗಿ ಬಸ್‌ಗಳು!