Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

SC, ST ಸಚಿವರು, ಶಾಸಕರ ಮಹತ್ವ ಸಭೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ವಿಧಾನ ಮಂಡಲಗಳ ವಿಶೇಷ ಅಧಿವೇಶನದ ಹೊತ್ತಲ್ಲಿಯೇ  ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.


ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್​ ಸದಸ್ಯರ ಸಭೆ ನಡೆಸುವ ಮೂಲಕ ಸುದ್ದಿಯಾಗಿದ್ದಾರೆ.


ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಈ ಹಿಂದೆ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ.
ಖಾಸಗಿ ಹೋಟೆಲ್​​ನಲ್ಲಿ ಸಭೆಸಚಿವರಾದ ಪರಮೇಶ್ವರ್
, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.


SCSP-TSP ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್​ನ SC, ST ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, SCSP-TSP ಅನುದಾನ ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್​ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ‌ನೀಡಬೇಕು.


 SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆಯೂ ಸಮಾಲೋಚನೆ ಈ ವೇಳೆ ನಡೆದಿದೆ ಎನ್ನಲಾಗಿದೆ.
SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು.


ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ