ಬೆಂಗಳೂರು ವಿಭಾಗೀಯ ಮಟ್ಟದ ಅಭಿವೃದ್ಧಿ ಸಭೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ಅವರು ಖುದ್ದಾಗಿ ಭೇಟಿ ನೀಡಿ ಪ್ರತ್ಯಕ್ಷ ಪರಿಶೀಲನೆ ನಡೆಸಲಿದ್ದಾರೆ.
ಈ ಭೇಟಿಯ ನಂತರ ಅವರು ಚಿತ್ರದುರ್ಗದಲ್ಲೇ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಬರ ಪರಿಸ್ಥಿತಿಯ ಕುರಿತು ಸಮಗ್ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಪ್ರಮುಖ ಸಭೆಯಲ್ಲಿ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸುವುದು, ರೈತರ ಹಿತರಕ್ಷಣೆ ಮಾಡುವುದು ಹಾಗೂ ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸುವ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ.
"ಜನರ ಅಗತ್ಯತೆಗಳು ಮತ್ತು ಸಮಯೋಚಿತ ಹಾಗೂ ಪರಿಣಾಮಕಾರಿ ಆಡಳಿತ ನೀಡುವ ನಮ್ಮ ಬದ್ಧತೆಯೇ ನಾವು ಕೈಗೊಳ್ಳುವ ಪ್ರತಿಯೊಂದು ನಿರ್ಧಾರಕ್ಕೂ ಮಾರ್ಗದರ್ಶಿಯಾಗಿದೆ. ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸಲು ಸರ್ಕಾರ ಸದಾ ಸಿದ್ಧವಾಗಿದೆ."
ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳು



