Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರ ಕಚೇರಿ ಮುಂದೆ ತಮಟೆ ಚಳವಳಿ ಹಿಂದಕ್ಕೆ: ಲಿಂಗಾರೆಡ್ಡಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
      ಕರ್ನಾಟಕದ ನೀರಾವರಿ ಒಳಗೊಂಡಂತೆ ಪ್ರಮುಖ ಯೋಜನೆಗಳ ಕಡತಗಳು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರ ಮುಖಾಂತರವೇ ಬರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ತರ ತೀರ್ಮಾನವ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ ಸ್ವಾಗತಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಅಕ್ಟೋಬರ್ ಎರಡರ ಗಾಂಧಿ ಜಯಂತಿ  ದಿನದಂದು ಚಿತ್ರದುರ್ಗಕ್ಕೆ ಆಗಮಿಸಿದ್ದ ಸಚಿವ ವಿ.ಸೋಮಣ್ಣ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಯೊಂದಿಗೆ ಅರ್ಧ ತಾಸು ಮಾತುಕತೆ ನಡೆಸಿ ಇನ್ನು ಒಂದುವರೆ ತಿಂಗಳ ಒಳಗಾಗಿ ಭದ್ರಾ ಮೇಲ್ದಂಡೆಗೆ ಕೇಂದ್ರ ಘೋಷಿಸಿರುವ 5300 ಕೋಟಿ ರೂ ಅನುದಾನದ ಮೊದಲ ಕಂತು ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದ್ದರು.

       ನಂತರದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 17 ರಂದು ಆದೇಶ ಹೊರಡಿಸಿ ಕರ್ನಾಟಕದ ನೀರಾವರಿ ಯೋಜನೆಯ ಪರಿಶೀಲನೆ ನಡೆಸುವ, ಅಧಿಕಾರಿಗಳೊಂದಿಗೆ ಚರ್ಚಿಸುವ ಜವಾಬ್ದಾರಿಯ ವಿ.ಸೋಮಣ್ಣ ಅವರಿಗೆ ವಹಿಸಿದೆ.

ರಾಜ್ಯ ಸಚಿವರೊರ್ವರಿಗೆ ಕೇಂದ್ರ ಸರ್ಕಾರ ಇಂತಹ ಜವಾಬ್ದಾರಿ ನೀಡಿರುವುದು ಇತ್ತಿಚೆಗಿನ ವರ್ಷಗಳಲ್ಲಿ ಪ್ರಥಮವಾಗಿದೆ.  ಕರ್ನಾಟಕದ ನೀರಾವರಿ ಯೋಜನೆ ಉಸ್ತುವಾರಿ ಸೋಮಣ್ಣ ಅವರಿಗೆ ವಹಿಸಿರುವುದು ಕೇಂದ್ರದ ಅನುದಾನ ತರುವಲ್ಲಿ ಸೋಮಣ್ಣ ಅವರ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೋರಾಟ ಸಮಿತಿ ಭಾವಿಸುತ್ತದೆ.

ಸಂಸದ ಗೋವಿಂದ ಕಾರಜೋಳ ಅವರನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ಕೇಂದ್ರ ಸರ್ಕಾರ ಸದಸ್ಯರನ್ನಾಗಿ ನೇಮಿಸಿದೆ. ಹಾಗಾಗಿ ಕಾರಜೋಳ ಹಾಗೂ ಸಚಿವ ವಿ.ಸೋಮಣ್ಣ ಒಟ್ಟಾಗಿ ಸೇರಿ ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಶ್ರಮಿಸಬೇಕೆಂದು ಸಮಿತಿ ಆಗ್ರಹಿಸುತ್ತದೆ.

      ಭದ್ರಾ ಮೇಲ್ದಂಡೆಗೆ ಕೇಂದ್ರ ಸರ್ಕಾರ ಅನುದಾನ ನೀಡಬೇಕಾದರೆ ಮೊದಲು ಅದು ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನಂತರ ಜಿಓ(ಸರ್ಕಾರಿ ಆದೇಶ) ಆಗಬೇಕು.ತರುವಾಯ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ರಾಜ್ಯ ಜಲಸಂಪನ್ನೂಲ ಅಧಿಕಾರಿಗಳು ಎಂಓಯು(ಒಪ್ಪಿಗೆ ಪತ್ರ) ಸಹಿಹಾಕಬೇಕು. ನಂತರ ಹಣಕಾಸು ಇಲಾಖೆ ನೆರವು ನೀಡಬೇಕು. ಇದಲ್ಲದೇ ಕೇಂದ್ರ ಅನುದಾನ ನೀಡಬೇಕಾದರೆ ರಾಜ್ಯ ಸರ್ಕಾರ ತನ್ನ ಪಾಲಿನ ಶೇ.40 ರಷ್ಟು ಅನುದಾನ ಕಾಯ್ದಿರಿಸಲು ಸಜ್ಜಾಗಬೇಕಾಗಿದೆ.

    ನೀರಾವರಿ  ಯೋಜನೆಯ ಉಸ್ತುವಾರಿಯನ್ನು ವಿ.ಸೋಮಣ್ಣ ಅವರಿಗೆ ನೀಡಿರುವುದರಿಂದ  ನೀರಾವರಿ ಹೋರಾಟ ಸಮಿತಿ ಸಚಿವರ ತುಮಕೂರು ಕಚೇರಿ ಮುಂದೆ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ತಮಟೆ ಚಳವಳಿಯ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದೆ.

ವಿಧಾನಸಭೆ  ಉಪ ಚುನಾಣೆ ನಂತರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜೊತೆ ಚರ್ಚಿಸುವುದಾಗಿ ಸೋಮಣ್ಣ ಭರವಸೆ ನೀಡಿದ್ದಾರೆ. ಅಗತ್ಯ ಬಂದಲ್ಲಿ ಹೋರಾಟ ಸಮಿತಿ ನಿಯೋಗದೊಂದಿಗೆ ಕೇಂದ್ರ ಜಲಶಕ್ತಿ ಸಚಿವರ ಭೇಟಿಯಾಗಲು ಸಮಯಾವಕಾಶ ಕಲ್ಪಿಸುವುದಾಗಿ ಸಚಿವರು ತಿಳಿಸಿದ್ದಾರೆ.

    ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಪಡೆಯಲು ಮುಂದಿನ ಕೇಂದ್ರ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಬೇಕು.  ಈಗಾಗಲೇ ರಾಜ್ಯ ಸರ್ಕಾರದಿಂದ ಜಲಶಕ್ತಿ ಸಚಿವಾಲಯದ ಮುಂದೆ ಮರು ಪ್ರಸ್ತಾವನೆ ಸಲ್ಲಿಕೆಯಾಗಿದ್ದು 1754 ಕೋಟಿ ರೂ ಅನುದಾನ ಖೋತಾ ಮಾಡದೆ ಬಜೆಟ್ ಘೋಷಣೆಯಂತೆ 5300 ಕೋಟಿ ರೂ ಒದಗಿಸಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ.

ಹೋರಾಟ ಸಮಿತಿಯ ಯಾದವರೆಡ್ಡಿ, ಧನಂಜಯ, ಜಿ.ಬಿ.ಶೇಖರ್, ಬಸ್ತಿಹಳ್ಳಿ ಸುರೇಶ್, ತಿಪ್ಪೇಸ್ವಾಮಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ